ಜನ ಮನದ ನಾಡಿ ಮಿಡಿತ

Advertisement

ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ


ಬಂಟ್ವಾಳ ಡಿ 3, ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಯುವ ಸಾಹಿತಿ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಶಿವ ಪ್ರಸಾದ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇ ಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವ ಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ ಎಂದರು.


ಈ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ಘಮ ಘಮಿಸುವ ಗುಟ್ಟು ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಕುಮಾರಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಕು.ಶ್ರುತಿಕಾ ಹೇಳಿದರು.


ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ ಉಜಿರೆಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, “ಮಕ್ಕಳೆಡೆಗೆ ಸಾಹಿತ್ಯ” ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವ ಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ಘಮ ಘಮಿಸುವ ಗುಟ್ಟು. ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ ಎಂದರು.
ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.
ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫರ್ತಿ ಗೀತೆ ಹಾಡಿ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ.ಬಾಯಾರು ಪ್ರಾಸ್ತಾವಿಸಿ, ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ಕಾರ್ಯಕ್ರಮನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!