ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕಡಬ, ಮಂಗಳೂರು ಮತ್ತು ಉಳ್ಳಾಲ ತಾಲೂಕಿನ ಗ್ರಾ. ಪಂ. ಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಎರಡನೇ ತಂಡದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ ಮನೆಗಳ ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ SKDRDP ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿಯ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೇಸ್, ಮೇಲ್ವಿಚಾರಕರಾದ ವನಿತಾ, ಲಲಿತಾ, ಎನ್.ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಜಯಾನಂದ, ಜಿಲ್ಲಾ ನರೇಗಾ ಐಇಸಿ ಸಂಯೋಜಕರಾದ ಸುನೀತಾ, ಮಂಗಳೂರು ಮತ್ತು ಉಳ್ಳಾಲ ತಾಲೂಕು ನರೇಗಾ ಐಇಸಿ ಸಂಯೋಜಕರಾದ ನಿಶ್ಮಿತ, ಸಂವಿಕೇಂದ್ರೀಕೃತ ತರಬೇತಿ ಸಂಯೋಜಕರಾದ ದೇವಕಿ ಮಾಂಟ್ರಾಡಿ, ಉಪಸ್ಥಿತರಿದ್ದರು.



