ಜನ ಮನದ ನಾಡಿ ಮಿಡಿತ

Advertisement

ಇಲಾಖೆಯ ಸಹವಾಸ ಬೇಡವೆಂದು ರಸ್ತೆಗೆ ಕಾಂಕ್ರೀಟ್ ಹಾಕಿಸಿದ ಅಧಿಕಾರಿ..!

ಬಿ.ಸಿ.ರೋಡಿನ ವಿವೇಕನಗರ ರಸ್ತೆಯ ಗುಂಡಿಯನ್ನು ಅಧಿಕಾರಿಯೋರ್ವರು ಕಾಂಕ್ರೀಟ್ ಮಾಡಿಸಿದ ಅಪರೂಪದ ಘಟನೆ ನಿನ್ನೆ ರಾತ್ರಿ ನಡೆದಿದೆ. ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದ ಸರ್ವೀಸ್ ರಸ್ತೆಯಿಂದ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ಭಾಗದಲ್ಲಿ ರಸ್ತೆಯನ್ನು ಉದ್ದಕ್ಕೆ ಅಗೆದು ಹಾಕಲಾಗಿದ್ದು, ಬಳಿಕ ಅದನ್ನು ಮುಚ್ಚದ ಕಾರಣದಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇಲ್ಲಿನ ಹೋಟೆಲ್ ಒಂದರ ಮಾಲಕರು, ನೀರಿನ ಪೈಪ್ ಅಳವಡಿಕೆಯ ಸಂದರ್ಭದಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದುಹಾಕಿ ಹೋಗಿದ್ರು. ಇದು ಪುರಸಭಾ ಸಹಿತ ಸಂಬOಧಿಸಿದ ಎಲ್ಲಾ ಇಲಾಖೆಯ ಅಧಿಕಾರಗಳ ಕಣ್ಣಿಗೆ ಬಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.

ಕನಿಷ್ಠ ಪಕ್ಷ ಅಗೆದು ಹಾಕಿದ ವ್ಯಕ್ತಿಯನ್ನು ಕರೆದು ಕಾಂಕ್ರೀಟ್ ಹಾಕಿಸುವ ಕೆಲಸ ಕೂಡ ಮಾಡಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಪುರಸಭೆಗೆ ಆರಂಭದಲ್ಲಿ ಮೌಖಿಕವಾಗಿ ಸಮಸ್ಯೆಯನ್ನು ಹೇಳಿಕೊಂಡಿದ್ದರು, ಬಳಿಕ ಲಿಖಿತವಾಗಿ ರಸ್ತೆಯನ್ನು ಸರಿಪಡಿಸುವಂತೆ ಮನವಿಯನ್ನು ಕೂಡ ಮಾಡಿದ್ದಾರೆ.

ಆದರೆ ಯಾವುದಕ್ಕೂ ಬೆಲೆ ಕೊಡದೆ ಮೌನವಾಗಿದ್ದ ಇಲಾಖೆಯ, ಸಹವಾಸವೇ ಬೇಡ ಎಂದು ಸ್ವತಃ ಕಾಂಕ್ರೀಟ್ ಹಾಕಿಸಿದ್ದಾರೆ. ರಾತ್ರಿ ವೇಳೆ ವಾಹನಗಳ ಓಡಾಟ ಕಡಿಮೆ ಇರುವ ಕಾರಣ ಸೋಮವಾರ ರಾತ್ರಿ ವೇಳೆ ಕಾಂಕ್ರೀಟ್ ಹಾಕಿದ್ದು, ಕಾಂಕ್ರೀಟ್ ಹಾಕಿಸಿದ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!