ಉಡುಪಿ:ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ತ್ರಿಶಾ ಸಮೂಹ ಸಂಸ್ಥೆಯ ಸಹಕಾರದಲ್ಲಿ ಉಡುಪಿ ಮಿಷನ್ ಕಂಪೌOಡಿನ ಜಗನ್ನಾಥ ಸಭಾಭವನದಲ್ಲಿ ದಿಕ್ಸೂಚಿ ಪ್ರೇರಣಾ ಮಾತು- ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈಯವರು ಉದ್ಘಾಟಿಸಿದ್ರು. ಇನ್ನೂ ಈ ಸಂದರ್ಭದಲ್ಲಿ ಮುಂಬೈಯ ಗ್ರೀನ್ ಸೋಲ್ ಸಂಸ್ಥೆಯ ಸ್ಥಾಪಕರಾದ ರಮೇಶ್ ಧಾಮಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಜನತಾ ಗ್ರೂಪ್ನ ಪ್ರಶಾಂತ್ ಕುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



