ಜನ ಮನದ ನಾಡಿ ಮಿಡಿತ

Advertisement

ಸಾಲ ಬಾದೆ ತಾಳಲಾರದೆ ಹೋಟೆಲ್ ಕಾರ್ಮಿಕ ಚೀಟಿ ಬರೆದಿಟ್ಟು ಆತ್ಮಹತ್ಯೆ

ಬಂಟ್ವಾಳ:ಸಾಲದ ಬಾದೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿರುವ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿOದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತಿದ್ರು. ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ನ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು ಎನ್ನಲಾಗಿದೆ.

ಬೆಳಿಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದಾಗ ಆತ ರಿಸೀವ್ ಮಾಡದೇ ಇದ್ದುದರಿಂದ ಸಂಶಯಗೊAಡು ವಿಶ್ರಾಂತಿ ಕೊಠಡಿ ಗೆ ತೆರಳಿದಾಗ ಮಲಗಿರುವುದು ಕಂಡು ಎಬ್ಬಿಸಿದ್ದಾರೆ. ಆದರೆ ಆತ ಮಲಗಿರುವ ಪಕ್ಕ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ಈತ ವಿಷ ಸೇವಿಸಿರುವ ಬಗ್ಗೆ ಸಂಶಯದಿAದ ಪೋಲೀಸರಿಗೆ ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!