ಜನ ಮನದ ನಾಡಿ ಮಿಡಿತ

Advertisement

ಡಿ. 7ರಂದು ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ, ಹಕ್ಕೊತ್ತಾಯ ಮಂಡನೆ

ಪುತ್ತೂರು:ವಿಕಲಚೇತನರಿಗೆ ಸರಕಾರದ ಹಲವು ಯೋಜನೆಗಳು ಸಹಿತ ವೇತನ, ಪ್ರಯಾಣ ಭತ್ಯೆ ಮುಂತಾದ ಸವಲತ್ತುಗಳು ಸಿಗಬೇಕು ಎಂದು ಒತ್ತಾಯಿಸಿ,

ಡಿ. 7ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದು, ಹಕ್ಕೊತ್ತಾಯ ಮಂಡಿಸಲಿದ್ದೇವೆ ಎಂದು ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಮತ್ತು ಒಕ್ಕೂಟದ ರಾಜ್ಯ ನಿರ್ದೇಶಕ ಪ್ರವೀಣ್ ನಾಯಕ್ ಹೇಳಿದ್ದಾರೆ.

ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಕಲಚೇತನ ವಿವಿಧೋದ್ದೇಶ ಸಂಘ, ನಗರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ರಾಜ್ಯ ಕಮಿಟಿಯ ನಿರ್ದೇಶನದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 15 ವರ್ಷಗಳಿಂದ ವಿಕಲಚೇತನರಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದ್ದರೂ ನಮ್ಮ ಮನವಿಗೆ ಯಾವುದೇ ಸರಕಾರ ಸ್ಪಂದಿಸುತ್ತಿಲ್ಲ. ಸಮಾಜದ ಕಟ್ಟ ಕಡೆಯ ವಿಕಲಚೇತನರು ಕಳೆದ ಹಲವಾರು ವರ್ಷಗಳಿಂದ ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಾ ಬಂದಿದ್ದೇವೆ ಎಂದರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಮುತ್ತಪ್ಪ ಪೆರಾಬೆ, ಸದಸ್ಯೆರಾದ ಸಹನ ಆರ್, ಶರ್ಮಿಳಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!