ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು: ಹಿರಿಯರ ಆದರ್ಶ ಹಾಗೂ ಶ್ರಮ ದೇವಸ್ಥಾನದ ಅಭಿವೃದ್ಧಿಗೆ ಕಾರಣ-ವಿಶ್ವಪ್ರಿಯ ತೀರ್ಥ ಸ್ವಾಮೀಜಿ

ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶಿಮಂತೂರು ಪರೆಂಕಿಲ ದಿ. ವೇ.ಮೂ. ವಾಸುದೇವ ಭಟ್ ರವರ 30ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದಿ. ವಾಸುದೇವ ಭಟ್ಟರು ಶ್ರಮಜೀವಿಯಾಗಿದ್ದು ಅಪಾರ ದೈವ ಭಕ್ತಿಯನ್ನು ಹೊಂದಿದ್ದರು. ಮಾತು ಹರಿತವಾದರೂ ಜನರಿಗೆ ಹಿತವಾದ ನುಡಿಗಳನ್ನು ನೀಡುತ್ತಾ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಿರಿಯರ ಆದರ್ಶ ಯುವಕರಿಗೆ ಪ್ರೇರಣೆಯಾಗಿದ್ದು ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿಕೊಡುವ ಕೆಲಸವಾಗಬೇಕು ಎಂದರು.ವೇದಿಕೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ವೇ. ಮೂ. ಸುಬ್ರಹ್ಮಣ್ಯ ಭಟ್ ತೋಕೂರು, ವಿಠಲ ಭಟ್ ಪರೆಂಕಿಲ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಭಟ್ ಪರೆಂಕಿಲ ರವರನ್ನು ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಗೌರವಿಸಿದರುರಾಜೇಶ್ವರಿ ಭಟ್ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!