ಜನ ಮನದ ನಾಡಿ ಮಿಡಿತ

Advertisement

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ 8ರಿಂದ 12ರ ವರೆಗೆ ನಡೆಯಲಿರುವ ಲಕ್ಷದೀಪೋತ್ಸವದ ಮೆರುಗಿನ ತಯಾರಿ ಪೂರ್ಣಗೊಂಡಿದ್ದು, ಭಕ್ತರ ಸ್ವಾಗತಕ್ಕೆ ಅಣಿಯಾಗಿದೆ. ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ಇದರೊಂದಿಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನೆರವೇರಲಿದೆ.

ದೇವರಿಗೆ ಸ್ವರ್ಣ ಪಲ್ಲಕಿ, ಬೆಳ್ಳಿ ರಥೋತ್ಸವ ವಿಶೇಷ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ, ಶಿವರಾತ್ರಿ ಹಾಗೂ ಕಾಲಾವಧಿ ಜಾತ್ರೆ ನೆರವೇರಲಿದೆ. ನಗರಾಲಂಕಾರದ ಸೊಬಗು ಇರಲಿದೆ. ವಿಶೇಷ ವರ್ಣಾಲಂಕಾರ ನೇತ್ರಾವತಿ ಸ್ನಾನಘಟ್ಟ ದಿಂದ ದೇವಸ್ಥಾನದ ವರೆಗೆ ಕಾಣಬಹುದಾಗಿದೆ. ಅದಲ್ಲದೆ ಪಾರಂಪರಿಕ ಶೈಲಿಯಲ್ಲಿ ಪಥಾಕೆ, ನಿಶಾನೆ, ನಗರಾಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.

ಲಕ್ಷದೀಪೋತ್ಸವದಲ್ಲಿ ಪ್ರಮುಖ ಆಕರ್ಷಣೆ ರಾಜ್ಯಮಟ್ಟದ ವಸ್ತುಪ್ರದರ್ಶನ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರೌಢ ಶಾಲೆಯ ಸಂಪೂರ್ಣ ಆವರಣದಲ್ಲಿ ಸ್ಟಾಲ್‌ಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ, ರುಡ್‌ಸೆಟ್‌, ಸಿರಿ ಉತ್ಪನ್ನ, ವಾಹನ ಪ್ರದರ್ಶನ, ಸಾವಯವ ಕೃಷಿ ಉತ್ಪನ್ನ, ಕರಕುಶಲ ವಸ್ತು, ಯಂತ್ರ ಪರಿಕರ, ಗೃಹೋಪಯೋಗಿ ವಸ್ತುಗಳ ಮಳಿಗೆ ಸಹಿತ ತಿಂಡಿ ತಿನಿಸು ಸೇರಿದಂತೆ ನಾನಾ ಬಗೆಯ ವಸ್ತುಪ್ರದರ್ಶನ ಮಳಿಗೆ ಸಜ್ಜಾಗಿದೆ ಭಕ್ತರಿಗೆ ಮನೋರಂಜನೆಗಾಗಿ ಒಂದೆಡೆ ಮಳಿಗೆಗಳಾದರೆ ರಥಬೀದಿಯಲ್ಲಿ ಸುಮಾರು 1500 ಸಂತೆ ಅಂಗಡಿಗಳು ಇರಲಿವೆ. 2 ಲಕ್ಷಕ್ಕೂ ಅಧಿಕಮಂದಿ ಸೇರುವ ನಿರೀಕ್ಷೆಯಿದೆ. ಈಗಾಗಲೆ ರಾಜ್ಯಾದ್ಯಂತ ಎಲ್ಲೆಡೆ ಸರಕಾರಿ ಹೆಚ್ಚುವರಿ ಬಸ್‌ ಸೇವೆ, ಭಕ್ತರಿಗೆ ಊಟದ ವ್ಯವಸ್ಥೆ, ಆರೋಗ್ಯ ಸೇವೆ ಸಹಿತ ಸ್ವತ್ಛತೆಗೆ ವಿಶೇಷ ಆಧ್ಯತೆ ನೀಡಲಾಗಿದೆ.

ಡಿ. 10ರಂದು ಅಮೃತವರ್ಷಿಣಿ ಸಭಾಭವನ ದಲ್ಲಿ ಲಲಿತಕಲಾ ಗೋಷ್ಠಿಯಲ್ಲಿ ರಾತ್ರಿ 7ರಿಂದ 10.30ರವರೆಗೆ ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್‌ ಅವರಿಂದ ಗಾನ ನೃತ್ಯ ವೈವಿಧ್ಯ- ಗುರುಕಿರಣ್‌ ನೈಟ್‌ ಸಂಭ್ರಮ ನಡೆಯಲಿದೆ. ಡಿ.11 ಸರ್ವಧರ್ಮ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ಡಿ.12 ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್‌. ಸೋಮನಾಥ್‌ ಉದ್ಘಾಟಿಸುವರು.ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!