ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಬಸ್- ಜೀಪು ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇಬ್ಬರು ಗಂಭೀರ

ಕಾರ್ಕಳ:ಖಾಸಗಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಇಂದು ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ ಎಂದು ಗುರುತಿಸಲಾಗಿದೆ. ಮಂಜು , ಸುಜಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳದಿಂದ ಪಡುಬಿದ್ರಿ ಮಾರ್ಗವಾಗಿ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ನಂದಳಿಕೆಯಿAದ ಬರುತ್ತಿದ್ದ ಮಹೇಂದ್ರ ಜೀಪ್ ನಡುವೆ ಈ ಅಪಘಾತ ಸಂಭವಿಸಿದೆ.

ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದವರು ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಯ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬಂದಿದ್ದು, ಪೂಜೆ ಮುಗಿಸಿ ಮಧ್ಯಾಹ್ನ ಊರಿಗೆ ಹಿಂದಿರುಗುವ ಸಂಧರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಅಪಘಾತದಲ್ಲಿ ಮೃತರಾದ ಕುಟುಂಬದ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ನಡೆಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

error: Content is protected !!