ಜನ ಮನದ ನಾಡಿ ಮಿಡಿತ

Advertisement

2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿರುವ ಕೃಷಿ ಸಿರಿ ಆಳ್ವಾಸ್ ವಿರಾಸತ್‌ನಲ್ಲಿ ಪುಷ್ಪಕಾಶಿ

ಮೂಡುಬಿದಿರೆ:ಅಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆಯ ಪ್ಯಾಲೇಸ್ ಗೌಂಡ್‌ನಲ್ಲಿ ಇದೇ ಬರುವ 14 ರಿಂದ 17ರವರೆಗೆ ಆಯೋಜಿಸಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಬರುವ ಕಲಾಪ್ರೇಮಿಗಳನ್ನು ಸ್ವಾಗತಿಸಲು ವೈವಿಧ್ಯಮಯ ಪುಷ್ಪಗಳ ಪ್ರದರ್ಶನಕ್ಕೆ ಕೃಷಿ ಸಿರಿ ಆವರಣ ಸಜ್ಜುಗೊಂಡಿದೆ.

ವಿರಾಸತ್‌ನಲ್ಲಿ ಕೃಷಿ ಸಂಸ್ಕೃತಿಗೆ ಒತ್ತು ನೀಡುವ ಸಲುವಾಗಿ ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ವಿವಿಧ ಆಯಾಮಗಳ ಚಿತ್ರಣವನ್ನು ಕೃಷಿಮೇಳ ನೀಡಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಿರಿ ಅವರಣದ ಹಾರೆಯ ಎತ್ತರದ ಜಾಗದ ಉದ್ದಕ್ಕೂ ಹಸಿರು ಪುಷ್ಪಗಳು ನಳ ನಳಿಸುತ್ತಿವೆ.

ವಿವಿಧ ತಳಿಯ ಸಸಿಗಳನ್ನು ಹೂಕುಂಡದಲ್ಲಿಟ್ಟು ಬೆಳೆಸುತ್ತಿದ್ದು ವಿರಾಸತ್ ವೇಳೆ ಪ್ರದರ್ಶನಗೊಳ್ಳಲಿವೆ. ಫಲ ಹಾಗೂ ಪುಷ್ಪ ಸಂಸ್ಕೃತಿಯ ಅತಿಥ್ಯ ಇಲ್ಲಿ ಸೊಗಯಿಸಲಿದೆ. ಬಯಲು ಸೀಮೆ, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ಸಿಗುವ ಹೂ, ತರಕಾರಿ, ಹಣ್ಣುಗಳ ಪರಿಚಯ, ಪ್ರದರ್ಶನ ವಿರಾಸತ್ ಮೇಳದಲ್ಲಿ ಇರಲಿದೆ. ದೇಶ ವಿದೇಶಗಳ ತಳಿಗಳು, ದೇಶಿ ತಳಿಗಳು, ಕಸಿ ಮಾಡಿದ ವೈವಿಧ್ಯಮಯ ಫಲಗಳು ಸಿಗಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳೂ ಮನ ಸೆಳೆಯಲು ಸಿದ್ಧಗೊಂಡಿವೆ. ಕೃಷಿ ಸಿರಿ ಅವರಣ 2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿದ್ದು ಒಂದೂವರೆ ಲಕ್ಷ ಗಿಡಗಳ ನಾಟಿ ಕಾರ್ಯ ಮುಗಿದಿದೆ. 50 ಸಾವಿರ ಗಿಡಗಳು ಪೂನಾ ಮತ್ತಿತರ ಕಡೆಗಳಿಂದ ಬರಲಿವೆ. ಇವುಗಳ ನಿರ್ವಹಣೆ ಮತ್ತು ಪ್ರದರ್ಶನದ ಜವಾಬ್ದಾರಿಯನ್ನು ಪೂನಾದ ಖಾಸಗಿ ಕಂಪೆನಿಗೆ ನೀಡಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!