ಜನ ಮನದ ನಾಡಿ ಮಿಡಿತ

Advertisement

ಹಿಂಸಾತ್ಮಕ ರೀತಿಯಲ್ಲಿ ದನ ಸಾಗಾಟ; ಇಬ್ಬರು ಆರೋಪಿಗಳು ಪೊಲೀಸರ ವಶ

ಬOಟ್ವಾಳ:ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವದೆ ಮಾಡಲು ಕೊಂಡು ಹೋಗುವ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ .ಐ.ರಾಮಕೃಷ್ಣ ನೇತೃತ್ವದ ತಂಡ ದನಗಳನ್ನು ಸೇಫ್ ಮಾಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಲೊರೆಟ್ಟುಪದವು ಬಳಿ ನಡೆದಿದೆ.

ಲೊರೆಟ್ಟೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿ ಪೊಲೀಸರು ಬೆನ್ನಟ್ಟಿ ದನಗಳನ್ನು ವಶಪಡಿಸಿಕೊಂಡಿದ್ದಾರೆ. ಓಮ್ನಿ ಕಾರಿನಲ್ಲಿ ಐದು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು. ಜಾಬೀರ್ ಮತ್ತು ನಾಸೀರ್ ಎಂಬವರು ಕಾರು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಎಸ್. ಐ.ರಾಮಕೃಷ್ಣ ಅವರು ರೌಂಡ್ಸ್ನಲ್ಲಿದ್ದ ಸಂದರ್ಭದಲ್ಲಿ ಓಮ್ನಿ ಕಾರೊಂದರ ಮೇಲೆ ಸಂಶಯಗೊOಡು ಬೆನ್ನು ಬಿದ್ದಾಗ ಅತೀ ವೇಗದೊಂದಿಗೆ ಕಾರು ಹೋಗುವುದು ಕಂಡು ಬಂದಿದೆ.

ಎಸ್.ಐ.ಅವರ ಸಂಶಯ ಬಲಗೊಂಡು ಲೊರೆಟ್ಟೊಪದವಿನಿಂದ ಬೆನ್ನಟ್ಟಿದಾಗ ಕಾರು ಟಿಪ್ಪುನಗರ ಕಡೆಗೆ ಹೋಗಿ ಕಾರನ್ನು ಅಲ್ಲೇ ಬಿಟ್ಟು ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೋರ್ವ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

error: Content is protected !!