ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಸುಧಾಮ ಫೌಂಡೇಶನ್ ಸಂಯೋಜನೆಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಗಾರದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

ಮುಲ್ಕಿ: ಸುಧಾಮ ಫೌಂಡೇಶನ್ ಸಂಯೋಜನೆಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಗಾರದಲ್ಲಿ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಕಾರ್ನಾಡ್ ಲುಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸುಧಾಮ ಫೌಂಡೇಶನ್ ಮೂಲಕ ರಾಷ್ಟ್ರೀಯತೆ ಉಳಿಸುವುದು, ಏಕತೆ ಬೆಳೆಸುವುದು,ಹಾಗೂ ಮಹಿಳೆಯರನ್ನು ಸಬಲೀಕರಣ ಗೊಳಿಸುವ ಕಾರ್ಯ ಅಭಿನಂದನೀಯ. ಮಹಿಳೆಯರು ತಮ್ಮ ಪ್ರತಿಭೆಯನ್ನು ಸದುಪಯೋಗಪಡಿಸಿ ರಾಷ್ಟ್ರದ ಹಿತಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಧಾಮ ಫೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿಯ ಉಪ ಪರಿಸರ ಅಧಿಕಾರಿ ಡಾ ಮಹೇಶ್ವರಿ ಸಿಂಗ್ ಮಾತನಾಡಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸ್ವಯಂ ಜಾಗೃತಿ ಮುಖ್ಯ, ಮಹಿಳೆಯರ ಸ್ವಾವಲಂಬನೆ ಹಾಗೂ ಪರಿಸರ ಕಾಳಜಿ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಫೌಂಡೇಶನ್ ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ. ಪಂ. ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ತರಬೇತಿಯಲ್ಲಿ ವಿವಿಧ ಸ್ವಸಹಾಯ ಗುಂಪಿನ ಪ್ರಮುಖರಾದ ರಂಜಿತಾ, ಪೂರ್ಣಿಮಾ, ಸಂಮಿತ್ರ, ರೇಖಾ, ಸೌಮ್ಯ ರವರಿಗೆ ಹಾಗೂ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಿಸಲಾಯಿತು. ತರಬೇತುದಾರ ಶಿಕ್ಷಕಿ ಸನ್ನಿತಾ ಮೋಹನ್ ಕೋಟ್ಯಾನ್ ರವರನ್ನು ಗೌರವಿಸಲಾಯಿತು.
ದಿನೇಶ್ ಕೊಲ್ನಾಡು ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!