ಜನ ಮನದ ನಾಡಿ ಮಿಡಿತ

Advertisement

ಪರ್ಯಾಯ ಮಹೋತ್ಸವ ಹತ್ತಿರ ಬಂದ್ರೂ ರಸ್ತೆಗಿಲ್ಲ ಡಾಂಬರು ಭಾಗ್ಯ..!

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಆದ್ರೆ ರಸ್ತೆ ರಿಪೇರಿ ಕಾರ್ಯ ಇನ್ನೂ ನಡೆಯದಿರುವುದು ಒಂದು ಕಡೆ ಬೇಸರಕ್ಕೆ ಕಾರಣವಾದರೆ ಇನ್ನೊಂದೆಡೆ ವಾಹನ ಸವಾರರು ಹೊಂಡಾಗುಂಡಿಗಳ ರಸ್ತೆಯಿಂದ ಬೇಸತ್ತು ಹೋಗಿದ್ದಾರೆ.

ಉಡುಪಿ ನಗರ ಭಾಗದ ರಸ್ತೆಯ ಅವ್ಯವಸ್ಥೆ ಇದು. ರಸ್ತೆ ಮಧ್ಯೆ ಹೊಂಡಾಗುಂಡಿ ಬಿದ್ದು ದ್ವಿಚಕ್ರ ವಾಹನ ಸವಾರರು ಕೈಕಾಲು ಮುರಿದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಉಡುಪಿಯ ಬೀಡಿನ ಗುಡ್ಡೆಯ ಬಳಿಯ ರಸ್ತೆ ಮಧ್ಯೆ ಅನೇಕ ಬೃಹತ್ ಗಾತ್ರ ಹೊಂಡ ಬಿದ್ದಿದ್ದು, ವಾಹನ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನು ಚಿಟ್ಟಾಡಿಯಿಂದ ಹನುಮಾನ ಗ್ಯಾರೇಜ್ ಗೆ ಸಾಗುವ ರಸ್ತೆಯ ಅವ್ಯವಸ್ಥೆಯಂತೂ ಹೇಳ ತೀರದು ಇಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆ ಅಗೆದಿದ್ದು ಇದರ ಮರು ಡಾಂಬರೀಕರಣ ಮಾಡದೇ ಹಾಗೇ ಬಿಟ್ಟ ಪರಿಣಾಮ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ.
ಪರ್ಯಾಯ ಮಹೋತ್ಸವ ಎದುರಾದಾಗ ಕನಿಷ್ಟ ರಸ್ತೆಗಳು ಡಾಂಬರೀಕರಣಗೊಳ್ಳುತ್ತದೆ.ಆದ್ರೆ ಈ ಬಾರಿ ಎಲ್ಲಾ ಕಡೆಯ ರಸ್ತೆಗೆ ಈ ಭಾಗ್ಯ ಉಂಟಾ ಗೊತ್ತಿಲ್ಲ ಆದ್ರೆ ಅತೀ ಅಗತ್ಯವಾಗಿ ಆಗಬೇಕಾದ ಕಡೆ ಡಾಂಬರೀಕರಣ ಮಾಡಿ ಎಂಬುದು ಜನ ಸಮಾನ್ಯರ ಒತ್ತಾಯವಾಗಿದೆ. ನಗರಸಭೆಯಿಂದ ಐದು ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಕ್ಕಾಗಿ ಈಗಾಗಲೇ ಕೆಲಸ ಆರಂಭವಾಗಿದ್ದು ಆದಷ್ಟು ಬೇಗ ನಗರದ ಎಲ್ಲಾ ರಸ್ತೆಗಳಿಗೂ ಡಾಂಬರು ಭಾಗ್ಯ ಸಿಗಲಿ ಎಂಬುದು ಜನ ಸಾಮಾನ್ಯರ ಆಶಯವಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!