ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಸಂಸ್ಥಾನದ ಒಡೆಯರ್ ಬೇಟಿ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಅರಮನೆಯ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮುಲ್ಕಿ ಸೀಮೆಯ ಬಪ್ಪನಾಡು ದೇವಸ್ಥಾನಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಮೈಸೂರು ಒಡೆಯರ್ ರವರನ್ನು ಶ್ರೀ ಕ್ಷೇತ್ರದ ವತಿಯಿಂದ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿಭವ್ಯವಾಗಿ ಸ್ವಾಗತಿಸಿದರು.

ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಒಡೆಯರ್ ರವರನ್ನು ಕ್ಷೇತ್ರದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.
ಬಳಿಕ ಧಾರ್ಮಿಕ ಸಭೆಯಲ್ಲಿ ಮೈಸೂರ್ ಒಡೆಯರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಧಾರ್ಮಿಕ, ಶೈಕ್ಷಣಿಕ ಸಹಿತ ಎಲ್ಲಾ ಕ್ಷೇತ್ರದಲ್ಲಿ ಮುಂದುವರೆದಿದ್ದು ಇಲ್ಲಿ ಬರುವುದೇ ಒಂದು ಭಾಗ್ಯ, ದಕ್ಷಿಣ ಕನ್ನಡ ಹಾಗೂ ಮೈಸೂರು ಸಂಸ್ಥಾನಕ್ಕೆ ಅವಿನಾಭಾವ ಸಂಬಂಧವಿದ್ದು ಇಲ್ಲಿನ ಜನರ ಸಂಸ್ಕಾರ ಹಾಗೂ ಸಂಸ್ಕೃತಿ ನೋಡುವುದೇ ಒಂದು ಭಾಗ್ಯ ಎಂದರು.


ಈ ಸಂದರ್ಭ ಅಳದಂಗಡಿಯ ಪದ್ಮಪ್ರಸಾದ ಅಜಿಲರು, ಸ್ವರೂಪ್ ಗೋಪಾಲ್ ರಾಜ್ ಆನಂದ್, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಗೌತಮ್ ಜೈನ್ ಮುಲ್ಕಿ ಅರಮನೆ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ
ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಸುಜಿತ್ ಸಾಲ್ಯಾನ್, ಉದ್ಯಮಿ ಶರತ್ ಕರ್ಕೇರ ಹೊಸಬೆಟ್ಟು, ಮೊಗವೀರ ಮುಖಂಡ ಗುರುವಪ್ಪ ಕೋಟ್ಯಾನ್, ಸಂಜೀವ ದೇವಾಡಿಗ ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!