ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮುಲ್ಕಿ ಅರಮನೆ ಅರಸು ಪ್ರಶಸ್ತಿ ಪ್ರದಾನ; ಸಾಧಕರಿಗೆ ಗೌರವ

ಮುಲ್ಕಿ: ಅರಮನೆ ವೆಲ್ ಫೇರ್ ಮತ್ತು ಚಾರಿಟೆಬಲ್ ಟ್ರಸ್ಟ್ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪ ರೇಟಿವ್‌ ಸೊಸೈಟಿ ಆಶ್ರಯದಲ್ಲಿ ಮುಲ್ಕಿ ಸೀಮೆ ಅರಸು ಕಂಬಳದ ಅಂಗವಾಗಿ ಅರಸು ಪ್ರಶಸ್ತಿ ಸಮಾರಂಭ ಪಡು ಪಣಂಬೂರು ಮುಲ್ಕಿ ಅರಮನೆಯ ಕಾಂತಾಬಾರೆ ಬೂದಾಬಾರೆ ಧರ್ಮಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ವಹಿಸಿದ್ದರು. ಮೈಸೂರು ಸಂಸ್ಥಾನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರು ಕಂಬಳ ಕ್ಷೇತ್ರದಲ್ಲಿನ ಸಾಧನೆಗೆ ದಿ. ಪಯ್ಯೋಟ್ಟು ಸದಾಶಿವ ಸಾಲ್ಯಾನ್ (ಮರಣೋತ್ತರ) ಸಾಮಾಜಿಕ ಕ್ಷೇತ್ರದಲ್ಲಿ ಉತ್ರುಂಜೆ ಭುಜಂಗ ಎಂ. ಶೆಟ್ಟಿ, ತುಳು- ಸಾಂಸ್ಕೃತಿಕ ಕ್ಷೇತ್ರದಲ್ಲಿ ನವೀನ್ ಶೆಟ್ಟಿ ಎಡ್ಮೆಮಾರ್, ಕೃಷಿ ಕ್ಷೇತ್ರದ ಸಾಧಕ ಗಂಗಾಧರ ದೇವಾಡಿಗ, ಕ್ರೀಡಾ ಕ್ಷೇತ್ರದಲ್ಲಿ ಸುಷ್ಮಾ ತಾರಾನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಹಳೆಯಂಗಡಿಯ ಡಾ.ಗುರುಪ್ರಸಾದ್ ನಾವಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಮಾಜೀ ಸಚಿವ ಕೆ.ಅಭಯಚಂದ್ರ ಜೈನ್, ಮೈಸೂರಿನ ಡಾ. ಉಮೇಶ್, ಕ್ಯಾ. ಬ್ರಿಜೇಶ್‌ ಚೌಟ, ಗೋಕುಲ್‌ ದಾಸ್ ಪೈ, ಚಿತ್ತ ರಂಜನ್ ಬೋಳಾರ, ದಿವಾಕರ ಕದ್ರಿ, ವಿವೇಕ್ ಆಳ್ವ ಮೂಡುಬಿದಿರೆ, ಡಾ. ಗಣೇಶ್ ಅಮೀನ್ ಸಂಕಮಾರ್, ರಂಜಿತ್ ಕೋಟ್ಯಾನ್ , ಟ್ರಸ್ಟ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ವಿವೇಕ್ ಆಳ್ವ, ಮೋಹನ್ ದಾಸ್ ಸುರತ್ಕಲ್, ರಾಮಚಂದ್ರ ನಾಯಕ್ ಕೊಲ್ನಾಡು ಗುತ್ತು, ಪ್ರಿಯ ದರ್ಶಿನಿ ಕೋ- ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾರ್ಡ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಅಮೀನ್ ಸಂಕಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!