ಜನ ಮನದ ನಾಡಿ ಮಿಡಿತ

Advertisement

ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು–ಮಹಾತ್ಮ ಗಾಂಧಿ ಮ್ಯೂಸಿಯಂ ಉದ್ಘಾಟನೆ

ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರು ಇದರ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2023 ಆದಿತ್ಯವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಶತಮಾನಗಳಷ್ಟು ಹಳೆಯದಾದ ಮಹಾತ್ಮ ಗಾಂಧಿ ಮ್ಯೂಸಿಯಂನ ಉದ್ಘಾಟನೆಯು ನೆರವೇರಿತು.ಭಾರತ ಸರಕಾರದ ಪುರಾತತ್ವ ಮತ್ತುಉತ್ಖನನ ಇಲಾಖೆಯ ಮಾಜಿ ನಿರ್ದೇಶಕರಾದ ಶ್ರೀ ರಾಮಚಂದ್ರ ಹೆಗಡೆ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಮಾಜಿ ಪ್ರಾಧ್ಯಾಪಕರು ಶ್ರೀ ಮುರುಗೇಶ್ ತುರುವೇಕೆರೆ, ಕೇರಳ ಸರ್ಕಾರದ ಪುರಾತತ್ವ ಇಲಾಖೆಯ ಡಾ.ವಿ.ಆರ್.ಶಾಜಿ, ಶ್ರೀ ಪ್ರಭಾಕರ ಕಿಣಿ , ಶ್ರೀ ರಾಮದಾಸ್ ಪ್ರಭು,ಮಹಾತ್ಮ ಗಾಂಧಿ ಮ್ಯೂಸಿಯಂನ ಪುನರ್ವಿನ್ಯಾಸಕ್ಕೆ ಕೊಡುಗೆ ನೀಡಿದ ಶ್ರೀ ಸುಜಯ್ ಲೋಬೋ ದೀಪ ಬೆಳಗಿಸಿ ಮ್ಯೂಸಿಯಂ ನ ಉದ್ಘಾಟನೆ ಮಾಡಿದರು. ಮ್ಯೂಸಿಯಂ ನಿರ್ದೇಶಕರಾದ ಶ್ರೀ ಪಯ್ಯನೂರು ರಮೇಶ್ ಪೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮಾವೇಶದ ದಿನ ಜರುಗಿದ ಈ ವಿಶಿಷ್ಟ ಪೂರ್ಣ ಕಾರ್ಯಕ್ರಮವು ಪುರಾತನ ವಸ್ತುಗಳು ಹಾಗೂ ಶಾಸನ ಶಾಸ್ತ್ರದ ಆಸಕ್ತಿ ಉಳ್ಳವರ ಮನಸೆಳೆಯಿತು. ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಮ್ಯೂಸಿಯಂನ ವೀಕ್ಷಣೆಗೆ ಮುಕ್ತ ಅವಕಾಶವನ್ನು ನೀಡಲಾಯಿತು.

ಕೆನರಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ವಾಸುದೇವ ಕಾಮತ್, ಕಾರ್ಯದರ್ಶಿ ಶ್ರೀ ಎಂ.ರಂಗನಾಥ್ ಭಟ್,ಸದಸ್ಯರಾದ ಶ್ರೀ ಸುರೇಶ್ ಕಾಮತ್ ,ಶ್ರೀ ಗೋಪಾಲಕೃಷ್ಣ ಶೆಣೈ CA ಎಂ.ವಾಮನ್ ಕಾಮತ್, ಶ್ರೀ ಬಸ್ತಿ ಪುರುಷೋತ್ತಮ ಶೆಣೈ, ಶ್ರೀ ಶಿವಾನಂದ ಶೆಣೈ, ಶ್ರೀ ಯೋಗೀಶ್ ಕಾಮತ್, ಶ್ರೀ ನರೇಶ್ ಶೆಣೈ, ಶ್ರೀಮತಿ ಅಶ್ವಿನಿ ಕಾಮತ್, ಶ್ರೀ ಗೋಪಿನಾಥ್ ಭಟ್, ಶ್ರೀ ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ಡಾ. ದೀಪ್ತಿ ನಾಯಕ್, ಪಿ ಆರ್ ಒ ಶ್ರೀಮತಿ ಉಜ್ವಲ್ ಮಲ್ಯ, ಸಮ್ಮಿಲನದ ಉಸ್ತುವಾರಿ ಶ್ರೀ ಗೋಪಾಲಕೃಷ್ಣ ಶೆಟ್ಟಿ,ಕೆನರಾ ಸಹೋದರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ,ಸಂಸ್ಥೆಯ ಹಳೆಯ ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!