ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮುಲ್ಕಿಅರಮನೆ ಅರಸು ಪ್ರಶಸ್ತಿ ಪ್ರದಾನ; ಸಾಧಕರಿಗೆ ಗೌರವ

ಮುಲ್ಕಿ:ಚಾರಿಟೆಬಲ್ ಟ್ರಸ್ಟ್ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪ ರೇಟಿವ್‌ ಸೊಸೈಟಿ ಆಶ್ರಯದಲ್ಲಿ ಮುಲ್ಕಿ ಸೀಮೆ ಅರಸು ಕಂಬಳದ ಅಂಗವಾಗಿ ಅರಸು ಪ್ರಶಸ್ತಿ ಸಮಾರಂಭ ಪಡು ಪಣಂಬೂರು ಮುಲ್ಕಿ ಅರಮನೆಯ ಕಾಂತಾಬಾರೆ ಬೂದಾಬಾರೆ ಧರ್ಮಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ವಹಿಸಿದ್ದರು.ಮೈಸೂರು ಸಂಸ್ಥಾನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರು ಕಂಬಳ ಕ್ಷೇತ್ರದಲ್ಲಿನ ಸಾಧನೆಗೆ ದಿ. ಪಯ್ಯೋಟ್ಟು ಸದಾಶಿವ ಸಾಲ್ಯಾನ್ (ಮರಣೋತ್ತರ) ಸಾಮಾಜಿಕ ಕ್ಷೇತ್ರದಲ್ಲಿ ಉತ್ರುಂಜೆ ಭುಜಂಗ ಎಂ. ಶೆಟ್ಟಿ, ತುಳು- ಸಾಂಸ್ಕೃತಿಕ ಕ್ಷೇತ್ರದಲ್ಲಿ ನವೀನ್ ಶೆಟ್ಟಿ ಎಡ್ಮೆಮಾರ್, ಕೃಷಿ ಕ್ಷೇತ್ರದ ಸಾಧಕ ಗಂಗಾಧರ ದೇವಾಡಿಗ, ಕ್ರೀಡಾ ಕ್ಷೇತ್ರದಲ್ಲಿ ಸುಷ್ಮಾ ತಾರಾನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಹಳೆಯಂಗಡಿಯ ಡಾ.ಗುರುಪ್ರಸಾದ್ ನಾವಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಮಾಜೀ ಸಚಿವ ಕೆ.ಅಭಯಚಂದ್ರ ಜೈನ್, ಮೈಸೂರಿನ ಡಾ. ಉಮೇಶ್, ಕ್ಯಾ. ಬ್ರಿಜೇಶ್‌ ಚೌಟ, ಗೋಕುಲ್‌ ದಾಸ್ ಪೈ, ಚಿತ್ತ ರಂಜನ್ ಬೋಳಾರ, ದಿವಾಕರ ಕದ್ರಿ, ವಿವೇಕ್ ಆಳ್ವ ಮೂಡುಬಿದಿರೆ, ಡಾ. ಗಣೇಶ್ ಅಮೀನ್ ಸಂಕಮಾರ್, ರಂಜಿತ್ ಕೋಟ್ಯಾನ್ , ಟ್ರಸ್ಟ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ವಿವೇಕ್ ಅಳ್ವ, ಮೋಹನ್ ದಾಸ್ ಸುರತ್ಕಲ್, ರಾಮಚಂದ್ರ ನಾಯಕ್ ಕೊಲ್ನಾಡು ಗುತ್ತು,ಪ್ರಿಯ ದರ್ಶಿನಿ ಕೋ- ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾರ್ಡ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಅಮೀನ್ ಸಂಕಮಾರ್ ನಿರೂಪಿಸಿದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!