ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿ ಪೂಜೆ


ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಭೂಮಿ ಪೂಜೆ ನೆರವೇರಿಸಿದರು. ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು ನೆರವಿನ ಸಹಕಾರ ನೀಡಿದಾಗ ಇಂತಹ ಸಮಾಜ‌ಮುಖಿ ಕೆಲಸ ಕಾರ್ಯಗಳನ್ನು ನೆರವೇರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.


ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ವಸತಿ ಸಮಿತಿಯ ಸಂಚಾಲಕ ದೇವೇಂದ್ರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಮಾಜೀ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಕಾಂತ್ ಶೆಟ್ಟಿ ಬಾಳ, ಪುಷ್ಪರಾಜ ಶೆಟ್ಟಿ ಮದ್ಯ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಶೆಟ್ಟಿ, ಕಾರ್ಪೋರೇಟರ್ ಲಕ್ಷ್ಮೀ ದೇವಾಡಿಗ, ನಿರ್ದೇಶಕರಾದ ಸುಜಾತ ಶೆಟ್ಟಿ, ಜಯಂತಿ ಟಿ ರೈ, ಸುಧಾಕರ ಶೆಟ್ಟಿ, ಯಶವಂತ ಶೆಟ್ಟಿ, ನೂತನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!