ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಪಿಂಚಣಿ ದಿನ ಆಚರಣೆ ಕಾರ್ಯಕ್ರಮ


ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ, ಬೆಂಗಳೂರು ಇವರು ಹಮ್ಮಿಕೊಂಡ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಿಂಚಣಿ ಕುಂದು ಕೊರತೆಗಳನ್ನು ನೋಂದಾಯಿಸಲು ಮತ್ತು ಪಿಂಚಣಿ ಕುರಿತಾದ ಮಾಹಿತಿ ನೀಡಲು ಬಂಟ್ವಾಳ ತಾಲೂಕು ಕಂದಾಯ ಇಲಾಖೆಯಿಂದ ಶನಿವಾರ ಗೋಳ್ತಮಜಲು ಗ್ರಾಮದಲ್ಲಿ “ಪಿಂಚಣಿ ದಿನ” ಆಚರಿಸಲಾಯಿತು.

ಗೋಳ್ತಮಜಲು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪ್ರೇಮ ಅವರು ಇಂತಹ ಯೋಜನೆಗಳಿಂದ ಬಡವರಾದ ಅಸಹಾಯಕ ವ್ಯಕ್ತಿಗಳಿಗೆ ಬಹಳಷ್ಟು ನೆರವು ದೊರೆಯುತ್ತದೆ. ಅಧಿಕಾರಿಗಳೇ ಫಲಾನುಭವಿಗಳ ಬಳಿಗೆ ಬಂದು ಪಿಂಚಣಿ ದಿನಾಚರಣೆಯನ್ನು ಆಚರಿಸುವುದು ಬಹಳ ಅರ್ಥಪೂರ್ಣವಾಗಿದೆ. ಇದರಿಂದ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತದೆ ಎಂದರು.

ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಜಯಂತ ಗೌಡ ಮಕ್ಕಾರು, ಕಂದಾಯ ಇಲಾಖೆಯ ಉಪತಹಶೀಲ್ದಾರರಾದ ದಿವಾಕರ ಮುಗುಳಿಯ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ್‌ ಆರ್. ಗ್ರಾಮ ಆಡಳಿತ ಅಧಿಕಾರಿ ಶಿಲ್ಪಾ ಜನಾರ್ಧನ್‌, ತಾಲೂಕು ಕಚೇರಿ ಸಿಬ್ಬಂದಿ ವೆಂಕಟರಮಣ ಗ್ರಾಮ ಸಹಾಯಕರಾದ ಮೋಹನ್ ದಾಸ್ ಕೊಟ್ಟಾರಿ,ಸಂಜೀವ ಮಂಚಿ, ಸದಾನಂದ ಪುದು, ವಿಠಲ ಬಡಗಬೆಳ್ಳೂರು ಉಪಸ್ಥಿತರಿದ್ದರು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ್‌ ಆಳ್ವ ಸ್ವಾಗತಿಸಿ, ವಂದಿಸಿದರು. ಫಲಾನುಭವಿಗಳು ಅದಾಲತ್‌ ನ ಸದುಪಯೋಗ ಪಡೆದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!