ಜನ ಮನದ ನಾಡಿ ಮಿಡಿತ

Advertisement

ಚಿತ್ರದುರ್ಗದಲ್ಲೇ ಮತ್ತೊಂದು ಅಸ್ಥಿಪಂಜರ.. ನಾಯಿಗಳು ತಲೆ ಬುರುಡೆ ಎಳೆದಾಡಿದ್ದಕ್ಕೆ ಮುಚ್ಚಿಟ್ಟ ರಹಸ್ಯ ಬಹಿರಂಗ

ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇದು ಆತ್ಮಹತ್ಯೆಯೋ? ಕೊಲೆಯೋ ಅನ್ನೋ ಅನುಮಾನ ಕಾಡುತ್ತಿದೆ. ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ತನಿಖೆ ನಡೆಯುತ್ತಿರುವಾಗಲೇ ಚಿತ್ರದುರ್ಗದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ.

ಸಿದ್ದವ್ವನದುರ್ಗ ಗ್ರಾಮದ ಜಮೀನಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಈ ಜಮೀನು ರಂಗಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಮೃತಪಟ್ಟ ದೇಹವನ್ನು ಮಣ್ಣಿನಲ್ಲಿ ಮುಚ್ಚಿಡಲಾಗಿತ್ತು. ನಾಯಿಗಳು ತಲೆ ಬುರುಡೆಯನ್ನ ಎಳೆದಾಡಿದ್ದರಿಂದ ಈ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.

ಬುರುಡೆ, ಅಸ್ಥಿಪಂಜರ ಸಿಕ್ಕ ಜಮೀನಿನಲ್ಲಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಬಸವರಾಜಪ್ಪ ಎಂಬುವವರು ಸೇವಿಸುತ್ತಿದ್ದ ಮಾತ್ರೆ ಹಾಗೂ ಬಟ್ಟೆಗಳು ಸಿಕ್ಕಿವೆ. ಈ ಸುಳಿವುಗಳಿಂದ ಜಮೀನಿನಲ್ಲಿ ಸಿಕ್ಕ ಅಸ್ಥಿಪಂಜರವನ್ನು ಮುದ್ದಾಪುರದ ರಂಗಪ್ಪ ಅವರದ್ದೇ ಎನ್ನಲಾಗಿದೆ.

ಮುದ್ದಾಪುರ ಗ್ರಾಮದ ಬಸವರಾಜಪ್ಪ ಇಸ್ಪೀಟ್ ಆಡುವ ಚಟಕ್ಕೆ ಬಿದ್ದಿದ್ದು ಹಲವರಿಗೆ ಹಣ ಕೊಡಬೇಕಿತ್ತು. ಇಸ್ಪೀಟ್ ಹಣ ಕೊಡದ ವಿಚಾರಕ್ಕೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜಪ್ಪ ಕಾಣೆಯಾದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!