ಜನ ಮನದ ನಾಡಿ ಮಿಡಿತ

Advertisement

ಆಟೋ ಚಾಲಕ ಆತ್ಮಹತ್ಯೆ

ಮೂಡುಬಿದಿರೆ: ಆಟೋ ಚಾಲಕನೋರ್ವ ಮನೆಯ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಪ್ರಾಂತ್ಯ ಗ್ರಾಮದ ಕಾಯರ್ ಗುಂಡಿ ನಿವಾಸಿ ಸೋಮೇಶ (54ವ)ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೊಡಂಗಲ್ಲು ಮಹಾಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದ ಅವರು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.
ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಸಹಾಯಕರನ್ನು ತನ್ನ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರಲ್ಲದೆ, ಶವ ಸಂಸ್ಕಾರ ಮಾಡುವಲ್ಲಿಯೂ ಪರೋಪಕಾರಿಯಾಗಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 5 ವರ್ಷಗಳ ಹಿಂದೆ ಸೊಮೇಶ್ ಅವರ ಸಹೋದರನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

ಉಡುಪಿ: ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿ*ಕ್ಕಿ- ಬಾಲಕಿ ಸಾ*ವು….!

error: Content is protected !!