ಜನ ಮನದ ನಾಡಿ ಮಿಡಿತ

Advertisement

ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ -ಜಯಾನಂದ ಪೆರಾಜೆ

ಬಂಟ್ವಾಳ ಜ.2ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.


ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ ,ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!