ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ

ಮಂಗಳೂರು : ಅಧಿಕ ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸೊಂದು ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮೀ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆಡಿಕ್ಕಿ ಹೊಡೆದು ಉರುಳಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ಕೈಕಂಬದಿಂದ ಬಿ. ಸಿ. ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಸಂಜೆ ವೇಳೆಯಾಗಿದ್ದರಿಂದ ಬಸ್‌ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಬಸ್ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!