ಜನ ಮನದ ನಾಡಿ ಮಿಡಿತ

Advertisement

ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ ಸ್ಪೆಕ್ಟರ್ ರಿಂದ ಸಖತ್ ಕ್ಲಾಸ್

ಹೊಸ ವರ್ಷಾಚರಣೆಯ ಸಂದರ್ಭ ರಸ್ತೆಯಲ್ಲಿ ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ಮಣಿಪಾಲ ಪೊಲೀಸರು ಹಲವು ಯುವಕರನ್ನು ವಾಹನ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.


ಡಿ.31ರಂದು ಮಧ್ಯರಾತ್ರಿ ವೇಳೆ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ್ ನಡುವಿನ ವಿ.ಎಸ್.ಆಚಾರ್ಯ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿಕೊಂಡಿದ್ದು, ಬುಲೆಟ್ ಸವಾರ ಸೈಲೆನ್ಸರ್‌ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡಿದ್ದರು.
ಅದೇ ರೀತಿ ವಿವಿಧ ಸವಾರರರು ರಸ್ತೆಯ ಮಧ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆಯೊಡೆದು ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿರುರುವುದಾಗಿ ದೂರಲಾಗಿದೆ.
ಈ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಮಣಿಪಾಲ ಪೊಲೀಸರು ಯುವಕರನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ಸಫೆಕ್ಟರ್ ದೇವರಾಜ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!