ಜನ ಮನದ ನಾಡಿ ಮಿಡಿತ

Advertisement

ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು..!!

ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದ ಕಾರಣಕ್ಕಾಗಿ ಮತ್ತೆ ಮುಖ್ಯಶಿಕ್ಷಕರ ಕೊಠಡಿಯೊಳಗೆ ನುಗ್ಗಿದ್ದಾರೆ.

ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಆ ಸಂದರ್ಭ ಯಾವುದೋ ವಾಹನ ಅಥವಾ ಇನ್ನಿತರ ಶಬ್ದ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ ಆರಂಭ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಕಳವು ಯತ್ನ ತಿಳಿದು ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಶಿಕ್ಷಣ ಇಲಾಖೆಗೂ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಕಳ್ಳರ ಕಾಟ ಜಾಸ್ತಿಯಾಗುತ್ತಿದ್ದು ಆರು ತಿಂಗಳ ಮೊದಲು ಸ್ಥಳೀಯ ಶಾಲೆಯ ಹತ್ತಿರ ಇರುವ ಬ್ಯಾಂಕ್ ಕಳವಿಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೆ ಮತ್ತೆ ಶಾಲೆಗೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರ ಪರಿಶೀಲನೆ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!