ಜನ ಮನದ ನಾಡಿ ಮಿಡಿತ

Advertisement

ಕೊರಗ ಸಮುದಾಯದ ಅವಹೇಳನ ಖಂಡಿಸಿ ಪ್ರತಿಭಟನೆ

ಉಡುಪಿ: ವಾರ ಪತ್ರಿಕೆಯೊಂದರ ಲೇಖನದಲ್ಲಿ ಕೊರಗ ಸಮುದಾಯದ ಕುರಿತು ಜಾತಿ ನಿಂದನೆ ಮತ್ತು ಅವಹೇಳನ ಮಾಡಿರುವುದಾಗಿ ಆರೋಪಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡಾ ಮಾತನಾಡಿ, ಲೇಖನ ಬರವಣಿಗೆಯು ಕೊರಗದ ಸಮುದಾಯದ ಮಾನವ ಹಕ್ಕು ಗಳ ಘೋರ ಉಲ್ಲಂಘನೆಯಾಗಿದೆ. ಕೊರಗ ಸಮುದಾಯದ ಘನತೆಯನ್ನು ಪ್ರಾಣಿಗಳೊಂದಿಗೆ ಸಮೀಕರಿಸಿ ಬರೆಯಲಾಗಿದೆ ಎಂದು ಆರೋಪಿಸಿದರು.


ಕೊರಗ ಸಮುದಾಯದ ಕುರಿತು ಜಾತಿ ನಿಂದನೆ ಮಾಡಿರುವ ಕೊರಗರನ್ನು ಅವಹೇಳನ ಮಾಡಿರುವ ಕೊರಗರ ಮಾನವ ಘನತೆಗೆ ಕುಂದು ಉಂಟು ಮಾಡಿರುವ ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಅವರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಸಂಯೋಜಕ ಪುತ್ರನ್ ಹೆಬ್ರಿ, ಪ್ರಧಾನ ಕಾರ್ಯದರ್ಶಿ ವಿನಯ ಅಡ್ವೆ, ಬೊಗ್ರ ಕೊಕ್ಕರ್ಣೆ, ಉಪಾಧ್ಯಕ್ಷೆ ಗಿರಿಜಾ ಜನ್ನಾಡಿ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!