ಜನ ಮನದ ನಾಡಿ ಮಿಡಿತ

Advertisement

ವಿಜ್ಞಾನದ ವಿಷಯಗಳನ್ನು ನಿಜ ಜೀವನದಲ್ಲಿ ಸಹಸಂಬಂಧಿಸಿ ಗ್ರಹಿಸುವುದು ಮುಖ್ಯ: ಡಾ. ಫರ್ಹಾನ್ ಜಮೀರ್

ಮೂಡುಬಿದಿರೆ: ವಿಜ್ಞಾನವನ್ನು ಕೇವಲ ಪುಸ್ತಕದ ಮೂಲಕ ಅರಿತರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರದಿಂದಲೂ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಬಹುದು ಎಂದು ಆತ್ಮಾ ಸಂಶೋಧನ ಕೇಂದ್ರದ ಮುಖ್ಯ ವೈಜ್ಞಾನಿಕ ಅಧಿಕಾರಿ ಹಾಗೂ ಆಳ್ವಾಸ್ ದ್ರವ್ಯಗುಣ ವಿಭಾಗದ ಪ್ರಾಧ್ಯಪಕ ಡಾ. ಫರ್ಹಾನ್ ಜಮೀರ್ ಹೇಳಿದರು.


ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್‌ವತಿಯಿಂದ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು . ಶಿಕ್ಷಣದ ಮೂಲ ಉದ್ದೇಶ ಅಂಕಗಳಿಸುದಷ್ಟೆ ಅಲ್ಲ. ತನ್ನಲ್ಲಿ ಹುದುಗಿರುವ ಕೌಶಲಗಳ ವೃದ್ಧಿ ಮುಖ್ಯವಾಗಿರುತ್ತದೆ. ಯಾವುದೇ ವಿಷಯವನ್ನು ಗ್ರಹಿಸಿ ಅರ್ಥಮಾಡಿಕೊಳ್ಳಬೇಕೆ ವಿನಃ ಕಂಠಪಾಠ ಮಾಡುವುದು ಒಳಿತಲ್ಲ. ವಿಜ್ಞಾನದ ವಿಷಯಗಳನ್ನು ನಿಜ ಜೀವನದಲ್ಲಿ ಸಹಸಂಬಂಧಿಸಿ ಗ್ರಹಿಸುವುದು ಮುಖ್ಯ.
ಹೆಣ್ಣು ಮಕ್ಕಳು ವಿಷಯವನ್ನು ಇದ್ದ ಹಾಗೆ ಬರೆದರೆ ಗಂಡು ಮಕ್ಕಳು ಅದೇ ವಿಷಯನ್ನು ವಿಭಿನ್ನ ರೀತಿಯಲ್ಲಿ ಬರೆಯುತ್ತಾರೆ. ಇದಕ್ಕೆ ಕಾರಣ ಹುಡುಗರ ಮೆದುಳು ತಾರ್ಕಿಕ ಸ್ಮರಣೆಗೆ ಹೆಚ್ಚಿನ ಒತ್ತು ನೀಡಿದರೆ (ಲಾಜಿಕಲ್ ಮೆಮೊರಿ) ಹಾಗೂ ಹುಡುಗಿಯರ ಮೆದುಳು ಛಾಯಾಸ್ಮರಣೆಗೆ (ಫೋಟೊಗ್ರಾಫಿಕ್ ಮೆಮೊರಿ) ಪ್ರಾಶಸ್ತö್ಯವನ್ನು ನೀಡುತ್ತದೆ.


ಅಧ್ಯಯನದ ಪ್ರಕಾರ ಗಂಡಿನ ಮೆದುಳಿನ ತೂಕ ಸರಾಸರಿ 1350 ಗ್ರಾಂ ಹಾಗೂ ಹೆಣ್ಣಿನ ಮೆದುಳಿನ ತೂಕ 1260ಗ್ರಾಂ ಇರುತ್ತದೆ. ಆದರೆ ಹೆಚ್ಚು ತೂಕ ಹೊಂದಿದ ಮಾತ್ರಕ್ಕೆ ಹೆಚ್ಚು ಜ್ಞಾನವಂತಾರಾಗಿರುತ್ತರೆಂದಲ್ಲ, ಕಡಿಮೆ ಮೆದುಳಿನ ಗಾತ್ರವನ್ನು ಹೊಂದಿರುವವರು ಕಡಿಮೆ ಸಾಮರ್ಥ್ಯ ಹೊಂದಿರಲು ಸಾಧ್ಯವಿಲ್ಲ. ಗಂಡಿನ ಮೆದುಳು ಏಕ ಕಾಲದಲ್ಲಿ ಒಂದೆ ಕೆಲಸವನ್ನು ಮಾಡಿದರೆ ಅದೇ ಹೆಣ್ಣಿನ ಮೆದುಳು ಬಹು ಕೆಲಸವನ್ನು ಮಾಡಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಅನುಕೂಲ ಹಾಗೂ ಅನನುಕೂಲಗಳು ಬಹಳಷ್ಟಿದೆ. ಗಂಡು ಏಕಕಾಲದಲ್ಲಿ ಒಂದೇ ಕೆಲಸ ಮಾಡುವುದರಿಂದ ಕೆಲಸದಲ್ಲಿ ಹೆಚ್ಚಿನ ಸಾಫಲ್ಯತೆ ಪಡೆದರೆ, ಹೆಣ್ಣು ಅಷ್ಟು ಫಲಿತಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಆದರೆ ಗಂಡು ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಒತ್ತಡಕ್ಕೊಳಗಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಲ್ಲದು. ಆದರೆ ಹೆಣ್ಣು ಈ ಪ್ರಕ್ರಿಯೆಯಲ್ಲಿ ಅನಾರೋಗ್ಯದಿಂದ ಬಳಲುವ ಸಂದರ್ಭಗಳು ಕಡಿಮೆ ಎಂದರು. ಋಣಾತ್ಮಕ ಮನಸ್ಥಿತಿಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಧನಾತ್ಮಕ ಚಿಂತನೆಯಿಂದ ಮಾತ್ರ ಉನ್ನತಿ ಸಾಧ್ಯ. ವಿದ್ಯಾರ್ಥಿಗಳು ಸದಾ ಧನಾತ್ಮಕ ಚಿಂತೆನೆಯಿಂದ ಪ್ರೇರೆಪಿತರಾಗಿರಬೇಕು ಎಂದರು.


ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪಪ್ರಾಂಶುಪಾಲೆ ಜಾನ್ಸಿ ಪಿಎನ್ ಜೀವಶಾಸ್ತç ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ ಇದ್ದರು. ಕಾಲೇಜಿನ ಇಕೋ ಕ್ಲಬ್‌ನ ಸಂಯೋಜಕಿ ಶುಭಾ ಬಂಗೇರ ಸ್ವಾಗತಿಸಿ, ಉಪನ್ಯಾಸಕಿ ರಮ್ಯಾ ರೈ ಅತಿಥಿಯನ್ನು ಪರಿಚಯಿಸಿ, ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ದೀಪಾ ಶೆಟ್ಟಿ ನಿರೂಪಿಸಿ, ಜೀವಶಾಸ್ತ್ರ ವಿಭಾಗದ ಮಾಘೇಶ್ವರಿ ವಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!