ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು: ಎಸ್ಕೆಪಿಎಮುಲ್ಕಿ ವಲಯದ ವತಿಯಿಂದ ಮುಲ್ಕಿ ಸೀಮೆ ಅರಸು ಕಂಬಳ ವೈಭವ 2023 ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮುಲ್ಕಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸೌತ್ ಕೆನರಾ ಫೋಟೋಗ್ರಾಫರ್ ಎಸೋಸಿಯೇಷನ್ ಮುಲ್ಕಿ ವಲಯದ ವತಿಯಿಂದ ಮುಲ್ಕಿ ಸೀಮೆ ಅರಸು ಕಂಬಳ ವೈಭವ 2023 ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ ಸೀಮೆಯ ಅರಮನೆಯಲ್ಲಿ ನಡೆಯಿತು.


ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಛಾಯಾಚಿತ್ರ ಪ್ರದರ್ಶನದ ಮೂಲಕ ಗ್ರಾಮೀಣ ಕ್ರೀಡೆಯಾದ ಕಂಬಳಕ್ಕೆ ಪ್ರೋತ್ಸಾಹಿಸಿದ ಎಸ್ಕೆಪಿಎ ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದರು.


ವೇದಿಕೆಯಲ್ಲಿ ಎಸ್ಕೆಪಿಎ ದ.ಕ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ, ದಯಾನಂದ ಬಂಟ್ವಾಳ, ಮುಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ , ಕಾರ್ಯದರ್ಶಿ ಯೋಗೀಶ್ ಪಾವಂಜೆ,ಜಿಲ್ಲಾ ಉಪ ಕಾರ್ಯದರ್ಶಿ ಹರೀಶ್ ಪಡುಪಣಂಬೂರು, ಮುಲ್ಕಿ ವಲಯ ಕಟ್ಟಡ ಸಮಿತಿ ಸದಸ್ಯ ನವೀನ್ ಚಂದ್ರ, ಎಸ್ ಕೆ ಪಿ ಎನ ಮೋಹನ್ ರಾವ್, ಜೀವನ್ ಪ್ರಕಾಶ್ಕಾಮೆ ರೊಟ್ಟು ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.


ಬಳಿಕ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರ ವಿವರ-ರಮಾನಂದ ಪೈ ಮಂಗಳೂರು (ಪ್ರ), ರವಿ ಕೋಟ್ಯಾನ್ ಮೂಡಬಿದ್ರೆ (ದ್ವಿ), ಸಾಗರ್ ದೇವಾಡಿಗ ಮಂಗಳೂರು (ತೃ)

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!