ಜನ ಮನದ ನಾಡಿ ಮಿಡಿತ

Advertisement

ನರಿಮೊಗರು ಗ್ರಾಮದಲ್ಲಿ ಒಟ್ಟು 47 ಲಕ್ಷದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.

ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ಮಾಡಿದ ಶಾಸಕರು ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ.ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು.

ಊರಿಡೀ ನಾನೇ ಅನುದಾನ ತಂದದ್ದು ಎಂದು ಹೇಳುವವರಿಗೆ ಈ ಪವಿತ್ರ ರಸ್ತೆಯ ಗೋಚರವಾಗಲಿಲ್ಲ ಎಂಬುದು ದುರಂತ. ಈ ರಸ್ತೆಗೆ ಸದ್ಯಕ್ಕೆ 5ಲಕ್ಷ ಅನುದಾನ ನೀಡಿದ್ದೇನೆ ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡುತ್ತೇವೆ ಎಂದು ಹೇಳಿದರು. ಹಿಂದುತ್ವದ ಆಧಾರದಲ್ಲಿ ಮತ ಕೇಳುವವರಿಗೆ ದೇವರು ತೆರಳುವ ರಸ್ತೆ ಮರೆಯಬಾರದಿತ್ತು. ನಮ್ಮದು ಪಕ್ಷಾತೀತ,ಜಾತ್ಯಾತೀತ ವ್ಯವಸ್ಥೆಯಾಗಿದೆ ನಾವು ಎಲ್ಲವನ್ನೂ ಒಂದೇ ದೃಷ್ಟಿಯಲ್ಲಿ ಕಾಣುವ ಮೂಲಕ ರಾಜಧರ್ಮ ಪಾಲನೆ ಮಾಡುತ್ತೇವೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ‌ಬಿ ವಿಶ್ವನಾಥ ರೈ ಮಾತನಾಡಿ ಜನರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಾಸಕರು ಜನಪ್ರಿಯತೆಯನ್ನು ಪಡೆಯುತ್ತಿದ್ದು ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಿದೆ. ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಮೀಸಲಿಡುವ ಮೂಲಕ ಶಾಸಕರು ಸಮಾನತೆಯನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರುಗಾಲದ ಬಾಬು ಶೆಟ್ಡಿ ವೀರಮಂಗಲ, ಹೊನ್ನಪ್ಪ ಪೂಜಾರಿ ಕೈಂದಾಡಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್
ಬೂತ್ ಅಧ್ಯಕ್ಷ ವಸಂತಪೂಜಾರಿ
,ಹಿರಿಯ ಕಾಂಗ್ರೆಸ್ ಮುಖಂಡವೇದನಾಥ ಸುವರ್ಣ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ್
ಮಂಜುನಾಥ ಶೇಖ, ಗಂಗಾಧರ್ ಶೆಟ್ಟಿ ಎಲಿಕ ,ಜಗದೀಶ್ ಗೌಡ ಎರುಕಡಪ್ಪು, ಲೋಕೇಶ್ ಗೌಡ ಎರುಕಡಪ್ಪು, ಗಣೇಶ್ ದೋಳ, ವಿಜೇತ್ ಗೌಡ ನಾಗರಾಜ್ ದೋಳ,ಮಹಿಳಾ ಕಾಂಗ್ರೆಸ್ ಘಡಕದ ವಿಶಾಲಾಕ್ಷಿ ಬನ್ನೂರು, ನರಿಮೊಗರು ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಹಲವು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!