ಜನ ಮನದ ನಾಡಿ ಮಿಡಿತ

Advertisement

ನರಿಮೊಗರು ಗ್ರಾಮದಲ್ಲಿ ಒಟ್ಟು 47 ಲಕ್ಷದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.

ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ಮಾಡಿದ ಶಾಸಕರು ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ.ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು.

ಊರಿಡೀ ನಾನೇ ಅನುದಾನ ತಂದದ್ದು ಎಂದು ಹೇಳುವವರಿಗೆ ಈ ಪವಿತ್ರ ರಸ್ತೆಯ ಗೋಚರವಾಗಲಿಲ್ಲ ಎಂಬುದು ದುರಂತ. ಈ ರಸ್ತೆಗೆ ಸದ್ಯಕ್ಕೆ 5ಲಕ್ಷ ಅನುದಾನ ನೀಡಿದ್ದೇನೆ ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡುತ್ತೇವೆ ಎಂದು ಹೇಳಿದರು. ಹಿಂದುತ್ವದ ಆಧಾರದಲ್ಲಿ ಮತ ಕೇಳುವವರಿಗೆ ದೇವರು ತೆರಳುವ ರಸ್ತೆ ಮರೆಯಬಾರದಿತ್ತು. ನಮ್ಮದು ಪಕ್ಷಾತೀತ,ಜಾತ್ಯಾತೀತ ವ್ಯವಸ್ಥೆಯಾಗಿದೆ ನಾವು ಎಲ್ಲವನ್ನೂ ಒಂದೇ ದೃಷ್ಟಿಯಲ್ಲಿ ಕಾಣುವ ಮೂಲಕ ರಾಜಧರ್ಮ ಪಾಲನೆ ಮಾಡುತ್ತೇವೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ‌ಬಿ ವಿಶ್ವನಾಥ ರೈ ಮಾತನಾಡಿ ಜನರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಾಸಕರು ಜನಪ್ರಿಯತೆಯನ್ನು ಪಡೆಯುತ್ತಿದ್ದು ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಿದೆ. ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಮೀಸಲಿಡುವ ಮೂಲಕ ಶಾಸಕರು ಸಮಾನತೆಯನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರುಗಾಲದ ಬಾಬು ಶೆಟ್ಡಿ ವೀರಮಂಗಲ, ಹೊನ್ನಪ್ಪ ಪೂಜಾರಿ ಕೈಂದಾಡಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್
ಬೂತ್ ಅಧ್ಯಕ್ಷ ವಸಂತಪೂಜಾರಿ
,ಹಿರಿಯ ಕಾಂಗ್ರೆಸ್ ಮುಖಂಡವೇದನಾಥ ಸುವರ್ಣ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ್
ಮಂಜುನಾಥ ಶೇಖ, ಗಂಗಾಧರ್ ಶೆಟ್ಟಿ ಎಲಿಕ ,ಜಗದೀಶ್ ಗೌಡ ಎರುಕಡಪ್ಪು, ಲೋಕೇಶ್ ಗೌಡ ಎರುಕಡಪ್ಪು, ಗಣೇಶ್ ದೋಳ, ವಿಜೇತ್ ಗೌಡ ನಾಗರಾಜ್ ದೋಳ,ಮಹಿಳಾ ಕಾಂಗ್ರೆಸ್ ಘಡಕದ ವಿಶಾಲಾಕ್ಷಿ ಬನ್ನೂರು, ನರಿಮೊಗರು ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಹಲವು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!