ಜನ ಮನದ ನಾಡಿ ಮಿಡಿತ

Advertisement

ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.10 ಲಕ್ಷ ರೂ ವಂಚನೆ; ಪ್ರಕರಣ ದಾಖಲು  

ಉಪ್ಪಿನಂಗಡಿ; ಉದ್ಯೋಗದ ನೆಪದಲ್ಲಿ ಯುವಕನೋರ್ವನಿಗೆ 2.10 ಲಕ್ಷ ರೂ. ವಂಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿಯೂರು ಗ್ರಾಮದ ನಿವಾಸಿ ಭವಿತ್ ಕೆ.ಎನ್ (23) ಅವರು ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದ (ಇನ್ಟಾಗ್ರಾಮ್) ಮೂಲಕ ಆರೋಪಿತ ವ್ಯಕ್ತಿ ಪ್ರಜ್ವಲ್ ಪರಿಚಯವಾಗಿದೆ.

ಇವರಿಬ್ಬರು ೨೦೨೩ ರ ಜೂನ್ ೫ ರಂದು ಬೆಂಗಳೂರಿನಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ವೇಳೆ ಪ್ರಜ್ವಲ್ ಮೆರೈನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈ ಉದ್ಯೋಗಕ್ಕೆ 3 ಲಕ್ಷ ರೂ. ಖರ್ಚಾಗುತ್ತದೆ ಎಂದು ತಿಳಿಸಿದ್ದ. ಬಳಿಕ ಭವಿತ್ ಖಾತೆಯಿಂದ ಜೂ ೧೮ ರಿಂದ ೨೮ ರ ಅವಧಿಯಲ್ಲಿ ಹಂತ-ಹಂತವಾಗಿ, ಒಟ್ಟು 2.10 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿರುತ್ತಾನೆ. ಬಳಿಕ ಪ್ರಜ್ವಲ್, ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ 10 ದಿವಸದೊಳಗೆ ಹಣವನ್ನು ಹಿಂತಿರುಗಿಸುವುದಾಗಿ ನಂಬಿಸಿ, ಈವರೆಗೆ ಕೆಲಸವನ್ನು ಮಾಡಿಕೊಡದೆ, ಪಡೆದಿರುವ ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿದ್ದಾನೆ ಎಂದು ಭವಿತ್ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!