ಜನ ಮನದ ನಾಡಿ ಮಿಡಿತ

Advertisement

ಫೆ. 11 ರಂದು ದುಬೈನಲ್ಲಿ ಮಂಜೇಶ್ವರದ ಅನಿವಾಸಿಗರ ಸಮ್ಮಿಲನ ಮೈಸರ್‌ಕಾರ್ ನ “ಗಮ್ಮತ್-2024”

ದುಬೈ : ಸಪ್ತ ಭಾಷೆ ಸಂಗಮ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರವು ವೈವಿಧ್ಯಮಯ ಭಾಷೆ ಸಾಹಿತ್ಯ ಸಾಂಸ್ಕೃತಿಕತೆಗೊಂದು ಕೈಹನ್ನಡಿಯಂತಿದೆ. ಅಲ್ಲಿನ ವಿವಿಧ ಭಾಷೆಗಳನ್ನಾಡುವ ವಿವಿಧ ಜಾತಿಯನ್ನೊಳಗೊಂಡ ಜನರಿದ್ದರೂ ಸದಾ ಸಹೋದರತ್ವದ ಸೌಹರ್ದತೆಯನ್ನು ಸಾರುವ ಆ. ಮಣ್ಣಿನ ಅನಿವಾಸಿಗರು ಉದ್ಯೋಗಕ್ಕಾಗಿ ಯುಎಇತಹ ಗಲ್ಫ್ ರಾಷ್ಟ್ರವನ್ನು ಅವಲಂಭಿಸಿದ್ದು ಇದೀಗ ಮಂಜೇಶ್ವರದ ಜನ ವೈವಿಧ್ಯತೆಯನ್ನು ಒಟ್ಟುಗೂಡಿಸಿಕೊಂಡು ಸಂಭ್ರಮಿಸಲು ಯುಎಇ ಯಲ್ಲಿ ಮೈಸರ್‌ಕಾರ್ ಎಂಬ ಬಳಗವನ್ನು ಕಟ್ಟಿಕೊಂಡು ವಿಭಿನ್ನವಾದ ಪ್ರಯತ್ನವನ್ನು ನಡೆಸಲಾಗಿದೆ.

ಇದರ ವಿಸೃತ ರೂಪವೇ ಫೆಬ್ರವರಿ 11 ರಂದು ಜರಗುವ ಸ್ನೇಹ ಸಮ್ಮಿಲನವಾದ “ಗಮ್ಮತ್ 2024” ಎಂಬ ಕಾರ್ಯಕ್ರಮ
ಎಂದು ಮೈಸರ್‌ಕಾರ್ ತಂಡದ ರೂವಾರಿ ಡಾ.ಅಬ್ದುಲ್ ರಹಮಾನ್‌ ಬಾವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.. ಅವರು ಮಾತನಾಡುತ್ತಾ ಕಳೆದ ಎರಡು ವರ್ಷ ಚಿಕ್ಕದಾಗಿ ಚೊಕ್ಕದಾಗಿ ಮೈಸರ್‌ಕಾರ್ ಗಮ್ಮತ್ ಎಂಬ ಕಾರ್ಯಕ್ರಮವನ್ನು ಅಯೊಜಿಸುತ್ತಾ ಮಂಜೇಶ್ಚರದ ಸ್ನೇಹ ಸೌಹರ್ದತೆಯನ್ನು ಕೊಲ್ಲಿ ರಾಷ್ಡ್ರದ ಜನತೆಯಲ್ಲೂ ಜತನವಾಗಿರಿಸಲಾಗಿದೆ. ಈ ವರ್ಷ ಯುಎಇಯ ಎಲ್ಲಾ ರಾಜ್ಯದಲ್ಲಿ ಇರುವ ಮಂಜೇಶ್ವರದವರನ್ನು ಒಟ್ಟುಗೂಡಿಸಿ “ಮೈಸರ್‌ಕಾರ್ ಗಮ್ಮತ್-2024” ಕಾರ್ಯಕ್ರಮಕ್ಕೆ ಯೋಜನೆ ಇರಿಸಿರುವುದರಿಂದ ಅಲ್ಲಿನ ವೈವಿಧ್ಯತೆ ಹಾಗೂ ಏಕತೆಯನ್ನು ಸಾಗರದಾಚೆಗೂ ವಿಸ್ತರಿಸಿ ಮಂಜೇಶ್ವರದ ಜನತೆಯ ಪರಂಪರೆಯನ್ನು ವಿಪುಲಗೊಳಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದರ ಅಂಗವಾಗಿ ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಹಿಳೆಯರಿಗೆ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು ಮಂಜೇಶದವರದ ಜನತೆಯ ಮಹಾ ಸಮ್ಮೇಳನದ ಪ್ರತೀತಿಯಲ್ಲಿ ನಡೆಸಲಾಗುವ ಕಾರ್ಯಕ್ರಮದಲ್ಲಿ ಪ್ರೀತಿ ಬೋಜನದ ವ್ಯವಸ್ಥೆಯು ಮಾಡಲಾಗಿದೆ ಎಂದು ತಿಳಿಸಿದರು.

ಫೆಬ್ರವರಿ 11 ರಂದು ನಗರದ Peas Modern British school Rashidiya ದ ಸಭಾಂಗಣದಲ್ಲಿ ಸಂಜೆ ಮೂರರಿಂದ ರಾತ್ರಿ ಹತ್ತರ ವರೆಗೆ ಜರಗಲಿರುವ “ಮೈಸರ್‌ಕಾರ್ ಗಮ್ಮತ್-2024” ಕಾರ್ಯಕ್ರಮದಲ್ಲಿ ಕೇರಳದ ಖ್ಯಾತ ಗಾಯಕರಾದ ಹಮೀದ್ ಕಲಾಭವನ್ ತಂಡದವರಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಒಪ್ಪನ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಜರಗಲಿದೆ. ಯುಎಇಯಲ್ಲಿ ಇರುವ ಮಂಜೇಶ್ವರದ ಅನಿವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕು ಎಂದು ಈ ಸಂದರ್ಭದಲ್ಲಿ ಸಂಘಟಕರಲ್ಲಿ ಒರ್ವರಾದ ನ್ಯಾಯವಾದಿ ಇಬ್ರಾಹಿಂ ಖಲೀಲ್ ಕೋರಿದ್ದಾರೆ. ಕಾರ್ಯಕ್ರಮದ ಮಾಹಿತಿಯ ಬಗ್ಗೆ ನಡೆದ ಚಿಕ್ಕ ಪತ್ರಿಕಾ ಸಭೆಯಲ್ಲಿ ಶೇಖ್ ಅಮೀನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!