ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಜಾನಪದ ಪರಿಷತ್ತು ದ.ಕ. ಜಿಲ್ಲಾ ಉಪಾಧ್ಯಕ್ಷರಾಗಿ ಡಾ. ಮಂದಾರ ರಾಜೇಶ್ ಭಟ್ ಆಯ್ಕೆ

ದಕ್ಷಿಣ ಕನ್ನಡ: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ಪತ್ರಕರ್ತ, ಪರಿಸರ ಸಂರಕ್ಷಣೆ ಮತ್ತು ಪ್ರಗತಿಪರ ಕೃಷಿಕ ಡಾ. ಮಂದಾರ ರಾಜೇಶ್ ಭಟ್ಟರು ಆಯ್ಕೆಯಾಗಿದ್ದಾರೆ.


ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಇವರ ಮಾರ್ಗದರ್ಶನದಂತೆ ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಧಿಕೃತವಾಗಿ ಮಂದಾರ ರಾಜೇಶ್ ಭಟ್ಟರನ್ನು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ಉಪಾಧ್ಯಕ್ಷ ಎಂದು ಘೋಷಿಸಲಾಯಿತು.


ಮುಂದಿನ ತಿಂಗಳು ನಡೆಯಲಿರುವ ಜಾನಪದ ಉತ್ಸವ, ಹಾಗೂ ಜಾನಪದ ಪರಿಷತ್ತು ಕಾರ್ಯಕ್ರಮಗಳ ಹೆಚ್ಚಿನ ಪ್ರಸರಣಕ್ಕಾಗಿ, ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಹಾಗೂ ಹೆಚ್ಚಿನ ಕಾರ್ಯ ಕ್ಷಮತೆಯನ್ನು ಹೊಂದಲು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಗಳ ಕಾರ್ಯಕ್ಷಮತೆ ಪರಿಶೀಲನೆ ಮತ್ತು ಹೆಚ್ಚಿನ ಪ್ರೋತ್ಸಾಹ ನೀಡಲು ಬೆಂಗಳೂರು ಜಾನಪದ ಪರಿಷತ್ತು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ನಿರ್ಧರಿಸಿದ್ದು, ಅಗತ್ಯವಿದ್ದ ಹಲವು ತಾಲೂಕುಗಳಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಮೂಡಬಿದ್ರೆ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ನೂತನ ಸದಸ್ಯರನ್ನೊಳಗೊಂಡ ತಂಡ ರಚನೆಯಾಗಿದೆ.
ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಜಾನಪದ ಪರಿಷತ್ತು ಕೇಂದ್ರ ಸಮಿತಿ ಮುಖ್ಯಸ್ಥರುಗಳು, ಜಿಲ್ಲಾ ಸಮಿತಿ ಮುಖ್ಯಸ್ಥರುಗಳು, ತಾಲೂಕು ಸಮಿತಿ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!