ಜನ ಮನದ ನಾಡಿ ಮಿಡಿತ

Advertisement

ಹೋಟೆಲ್ ಉದ್ಯಮಿ ಕೃಷ್ಣ ಭಟ್ ತಿರುಪತಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ

ದಕ್ಷಿಣ ಕನ್ನಡ : ಹೋಟೆಲ್ ಉದ್ಯಮಿ ಕೃಷ್ಣ ಭಟ್ ತಿರುಪತಿ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಾವರಾಗಿದ್ದು, ಕರಾಡ ಬ್ರಾಹ್ಮಣ ಸಮಾಜದವರಾಗಿದ್ದು, ಹಲವಾರು ವರ್ಷಗಳ ಹಿಂದೆ ತಿರುಪತಿಗೆ ತೆರಳಿ ಅಲ್ಲಿ ಹೋಟೆಲ್ ಉದ್ಯಮವನ್ನು ಆರಂಭಿಸಿ, ಪ್ರಸ್ತುತ ಯಶಸ್ವಿ ಉದ್ಯಮಿ ಎನಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಉದ್ಯೋಗದಾತರಾಗಿದ್ದರು.


ಕರ್ನಾಟಕದಿಂದ ತಿರುಪತಿಗೆ ತೆರಳುವ ಅದೆಷ್ಟೋ ಯಾತ್ರಿಕರಿಗೆ ಮಾರ್ಗದರ್ಶನ ಸಹಕಾರ ಹಾಗೂ ವ್ಯವಸ್ತೆ ಮಾಡಿ ಎಲ್ಲರಲ್ಲೂ ತಿರುಪತಿ ಕೃಷ್ಣಣ್ಣ ಎನಿಸಿಕೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡಿ ಉಡುಗೈದಾನಿ ಎನಿಸಿಕೊಂಡಿದ್ದರು. ಸುಮಾರು 74 ವರ್ಷ ಪ್ರಾಯದ ಕೃಷ್ಣ ಭಟ್ ತಿರುಮಲ ಇವರು ಪತ್ನಿ ಹಾಗೂ ಎರಡು ಮಕ್ಕಳ ಕುಟುಂಬದ ತುಂಬು ಕುಟುಂಬದವರಾಗಿದ್ದು, ಅವಿಭಜಿತ ದಕ್ಷಿಣ ಕನ್ನಡದ ಕರಾಡ ಬ್ರಾಹ್ಮಣ ಸಮಾಜದ ಸಹಿತ ಕರ್ನಾಟಕ ಹಾಗೂ ಆಂಧ್ರದಲ್ಲಿ ಅಪಾರ ಸಂಖ್ಯೆಯ ಪ್ರೀತಿಪಾತ್ರರನ್ನು ಹೊಂದಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!