ಜನ ಮನದ ನಾಡಿ ಮಿಡಿತ

Advertisement

ಅನಂತಾಡಿಯಲ್ಲಿ ನರೇಗಾ ದಿವಸ ಆಚರಣೆ


ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್‌ಗಾರ್‌ ದಿನಾಚರಣೆ ನಡೆಯಿತು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್‌ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್‌ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.


ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್‌ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್‌, ಆಯುಷ್ಮಾನ್‌ ಕಾರ್ಡ್‌ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!