ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯ ಬಂಧನ


ಉಡುಪಿ: ಮೂರು ವರ್ಷಗಳ ಹಿಂದೆ ಬ್ರಹ್ಮಾವರ ಕುಮ್ರಗೋಡುವಿನ ಮಿಲನ ರೆಸಿಡೆನ್ಸಿಯಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಗೋರಕ್ ಪುರದ ಧರ್ಮೇಂದ್ರ ಕುಮಾರ್ ಸುಹಾನಿ ಎಂದು ಗುರುತಿಸಲಾಗಿದೆ. ಈತ 3 ವರ್ಷಗಳಿಂದ ದುಬೈನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ ತನ್ನ ಊರಿಗೆ ಬರುತ್ತಿದ್ದಂತೆ ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿ ಧರ್ಮೇಂದ್ರ ಕುಮಾರ್ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ ನನ್ನು ಮೃತ ವಿಶಾಲ ಅವರ ಗಂಡ ರಾಮಕೃಷ್ಣನಿಗೆ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ್ದನು. ಆರೋಪಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಪ್ರಮುಖ ಆರೋಪಿ ಮೃತ ವಿಶಾಲ ಗಾಣಿಗ ಅವರ ಗಂಡ ರಾಮಕೃಷ್ಣ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ‌.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!