ಜನ ಮನದ ನಾಡಿ ಮಿಡಿತ

Advertisement

ಯುವ ಬಂಟರ ಸಂಘ (ರಿ.) ಕುಂದಾಪುರ: ದಶಮ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಫೆ. 11ರಂದು “ಭಾವೈಕ್ಯ” ವಿನೂತನ ಕಾರ್ಯಕ್ರಮ

ಕುಂದಾಪುರ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ದಶಮ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಆಯೋಜನೆಗೊಂಡ, ಸಮಗ್ರ ಕರ್ನಾಟಕ ಬಂಟರ ಸಮಾಗಮ “ಭಾವೈಕ್ಯ” ವಿನೂತನ ಕಾರ್ಯಕ್ರಮ 11 ಫೆಬ್ರವರಿ ಭಾನುವಾರ ಬೆಳಿಗ್ಗೆ 9.00 ಗಂಟೆಗೆ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ ಕೋಟೇಶ್ವರದಲ್ಲಿ ನಡೆಯಲಿದೆ.

ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಡಾ! ನಿತ್ಯಾನಂದ ಅಂಪಾರು ಇವರ ಸಾರಥ್ಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ‘ವಿದ್ಯಾದೀವಿಗೆ’ ಯೋಜನೆಯಡಿ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ‘ನವಚೇತನ’ ಯೋಜನೆಯಡಿ ವಿಶೇಷ ಚೇತನರಿಗೆ ಪ್ರೋತ್ಸಾಹಧನ, ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಬಂಟ ಯುವ ಸಾಧಕರಿಗೆ ಸನ್ಮಾನ, ಆಯುರ್ವೇದ ಚಿಕಿತ್ಸೆ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚಿತ ವಿಶೇಷ ಅರೋಗ್ಯ ತಪಾಸಣೆ, , ನಾಡಿನ ಜನಪ್ರಿಯ ಗಾಯಕ ಗಾಯಕಿಯರಾದ ರಾಜೇಶ್ ಕೃಷ್ಣನ್, ಎಂ. ಡಿ. ಪಲ್ಲವಿ, ಮಾನಸ ಹೊಳ್ಳ ಅವರಿಂದ ಸಂಗೀತ ಸಂಜೆ ನಡೆಯಲಿದೆ.

ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಮುದಾಯದ ಹಿರಿಯ ಮುಖಂಡರಾದ ಬಿ. ಅಪ್ಪಣ್ಣ ಹೆಗ್ಡೆ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರು ಮರ್ಕಂಟೈಲ್ ಕಂ ಪ್ರೈ.ಲಿ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಎಚ್.ಎಸ್ ಶೆಟ್ಟಿ ಅವರನ್ನು ಅಭಿನಂದಿಸಲಿದ್ದಾರೆ. ಫಾರ್ಚ್ಯುನ್ ಗ್ರೂಪ್ ಆಫ್ ಹೊಟೇಲ್ಸ್ ದುಬಾಯಿ ಸಿಎಂಡಿ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ದಶರಥ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ. ಸೌತ್ ಫೀಲ್ಡ್ ಪೈಂಟ್ಸ್ ಬೆಂಗಳೂರು ಆಡಳಿತ ನಿರ್ದೇಶಕರಾದ ಎಸ್.ಎಸ್. ಹೆಗ್ಡೆ ವಿದ್ಯಾ ದೀವಿಗೆಗೆ ಚಾಲನೆ ನೀಡಲಿದ್ದಾರೆ. ಮೆರಿಟ್ ಹಾಸ್ಪಿಟಾಲಿಟಿ ಮುಂಬಯಿ ಸಿಎಂಡಿ ಬೆಳ್ಳಾಡಿ ಅಶೋಕ್ ಶೆಟ್ಟಿ ನವಚೇತನಕ್ಕೆ ಚಾಲನೆ ನೀಡಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸಂಸ್ಥೆಯ ಡಾ. ಎಂ .ಮೋಹನ್ ಆಳ್ವ ಹಾಗು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಶುಭಾಶಂಸನೆಗೈಯಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!