ಜನ ಮನದ ನಾಡಿ ಮಿಡಿತ

Advertisement

ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆ

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೊಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ.

ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ ಸಾಯಂಕಾಲ ಅಡ್ಯನಡ್ಕದ ಮನೆ ಬಳಿಗೆ ಬಂದ ಸಂತ್ರಸ್ತ ಯುವತಿಗೆ ಪ್ರೀತಿ ಮಾಡುವುದಾಗಿ ಹೇಳಿದ ಯುವಕ ಸಿಕ್ಕಿಲ್ಲ. ಇದರಿಂದ ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದು ಮನೆಯ ಮುಂದೆ ಕೂತಿದ್ದಾಳೆ. ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!