ಜನ ಮನದ ನಾಡಿ ಮಿಡಿತ

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ ; ಸಿಎಂ ಆದೇಶ

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.

ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!