ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮುಂದಿನ ಶನಿವಾರ ಮೂಡಬಿದ್ರೆಯಲ್ಲಿ ಜಾನಪದ ಸಂಭ್ರಮ, ಜಾನಪದ ಪರಿಷತ್ತು ಮೂಡಬಿದ್ರೆ ಸದಸ್ಯರ ಪದಗ್ರಹಣ; ತುಳುನಾಡ ಕೆಡ್ಡಸ ಆಚರಣೆ; ನಡೆದಿದೆ ಪೂರ್ವ ತಯಾರಿ ಸಿದ್ಧತೆ…

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮೂಡಬಿದ್ರೆ ತಾಲೂಕು ಘಟಕದ ನೂತನ ಸದಸ್ಯರ ಪದಗ್ರಹಣ ಸಮಾರಂಭ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮವು ಮೂಡಬಿದ್ರೆ ಸಮಾಜ ಮಂದಿರದಲ್ಲಿ ಫೆ.10ರಂದು ಮಧ್ಯಾಹ್ನ 2 ಗಂಟೆ ಬಳಿಕ ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.


ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ,ತುಳುಕೂಟ ಮೂಡಬಿದರೆ, ತುಳು ವರ್ಲ್ಡ್ ಮಂಗಳೂರು, ಇದರ ಸಂಯುಕ್ತ ಆಶ್ರಯದಲ್ಲಿ “ತುಳುನಾಡ ಕೆಡ್ಡಸ ಆಚರಣೆ” ಹಾಗೂ “ಜಾನಪದ ಸಂಭ್ರಮ” ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭ ನಡೆಯಲಿದ್ದು, ತುಳುನಾಡ ಕೆಡ್ಡಸ ಆಚರಣೆ ಪ್ರಾತ್ಯಕ್ಷಿಕೆಯನ್ನು ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀನಿವಾಸ ಆಳ್ವ, ಕಳತ್ತೂರು, ಆಗಮಿಸಲಿದ್ದು ತುಳು ಸಾಹಿತಿ ಉಗ್ಗಪ್ಪ ಪೂಜಾರಿಯವರು ಉಪಸ್ಥಿತರಿರುವರು ಕಾರ್ಯಕ್ರಮ ನಿರ್ವಹಣೆಯನ್ನು ಡಾ. ನಾಗರಾಜ್ ಶೆಟ್ಟಿ ಅಂಬೂರಿ ಹಾಗೂ ಅಭಿಷೇಕ್ ಶೆಟ್ಟಿ ಐಕಳ ಇವರು ನಡೆಸಲಿದ್ದಾರೆ.


ಜಾನಪದ ಸಂಭ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಭೂಷಣ ಡಾಕ್ಟರ್ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಮೂಡಬಿದ್ರೆ ಇವರು ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಪದ್ಮಶ್ರೀ ಭಟ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ, ಮುಖ್ಯ ಅತಿಥಿಗಳಾಗಿ ಡಾ. ಮೋಹನ ಆಳ್ವ, ಆಳ್ವಾಸ್ ಪ್ರತಿಷ್ಠಾನ,, ಅಭಯ ಚಂದ್ರ ಜೈನ್ , ಮಾಜಿ ಸಚಿವರು,, ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ , ಅಧ್ಯಕ್ಷರು ಜಾನಪದ ಪರಿಷತ್ ದಕ್ಷಿಣ ಕನ್ನಡ,,
ಶ್ರೀಪತಿ ಭಟ್, ಧನ ಕೀರ್ತಿ ಬಲಿಪ, ಡಾಕ್ಟರ್ ರಾಜೇಶ ಆಳ್ವ, ಚಂದ್ರಹಾಸ ದೇವಾಡಿಗ, ಡಾಕ್ಟರ್ ರಾಜೇಶ್ ಭಟ್ ಮಂದಾರ, ರಾಜೇಶ್ ಸ್ಕೈಲಾರ್ಕ್, ಇವರ ಗೌರವ ಉಪಸ್ಥಿತಿ ಇರಲಿದೆ ಹಾಗೂ ಸಭಾ ಕಾರ್ಯಕ್ರಮದ ನಿರ್ವಹಣೆಯನ್ನು ಚೇತನ ರಾಜೇಂದ್ರ ಹೆಗ್ಡೆ ಮಾಡಲಿದ್ದಾರೆ ಎಂದು ಆಮಂತ್ರಣ ಪತ್ರದ ಪ್ರಕಟಣೆಯಲ್ಲಿ ಸಂಘಟಕರು ತಿಳಿಸಿರುತ್ತಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!