ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕರಾಟೆ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸುಧಾರಣೆ – ಈಶ್ವರ್ ಕಟೀಲ್

ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.


ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ  ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್‌ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!