ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕರಾಟೆ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸುಧಾರಣೆ – ಈಶ್ವರ್ ಕಟೀಲ್

ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.


ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ  ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್‌ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!