ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕರಾಟೆ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸುಧಾರಣೆ – ಈಶ್ವರ್ ಕಟೀಲ್

ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.


ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ  ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್‌ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!