ಜನ ಮನದ ನಾಡಿ ಮಿಡಿತ

Advertisement

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ

ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.


ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಿಳಾ ಮಂಡಳಿಯ ಸದಸ್ಯೆಯರು ಅಭಿನಯಿಸುವ ಬಾಲೆಗ್ ಒಲಿಯಿನ ಭ್ರಾಮರಿ ನಾಟಕ ಯಶಸ್ವಿಯಾಗಲಿ. ಈ ನಾಟಕದಲ್ಲಿ ಅಭಿನಯಿಸಿದ ಎಲ್ಲಾ ಕಲಾವಿದರಿಗೆ ಶ್ರೀ ಕ್ಷೇತ್ರದ ದೈವದ ಆಶೀರ್ವಾದ, ಅನುಗ್ರಹ ಇರಲಿ. ಕಟೀಲು ಭ್ರಾಮರಂಭಿಕೆಯ ಕತೆಯನ್ನಾಧರಿಸಿದ ನಾಟಕ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದರು. ಸಮಾರಂಭದಲ್ಲಿ ಪ್ರದ್ಯುಮ್ನ ರಾವ್ ಕಯ್ಯೂರು ಗುತ್ತು, ಸುಧಾಕರ್ ಶಿಬರೂರು, ತುಕಾರಾಮ್ ಶೆಟ್ಟಿ ಪರ್ಲಬೈಲು ಗುತ್ತು, ಸುಷಾಮ ಶೆಟ್ಟಿ ಶಿಬರೂರು ಗುತ್ತು, ಜಿತೇಂದ್ರ ಶೆಟ್ಟಿ ಕೊರ್ಯಾರ್ ಗುತ್ತು, ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್, ಮಹಿಳಾ ಮಂಡಳಿಯ ಅಧ್ಯೆಕ್ಷೆ ಸುಪ್ರಜಾ ಪ್ರಸಾದ್, ಸುಜಾತ ಶೆಟ್ಟಿ, ಸೂರಿಂಜೆ ಗ್ರಾಮ‌ಪಂಚಾಯತ್ ಅಧ್ಯೆಕ್ಷೆ ಗೀತಾ ಶೆಟ್ಟಿ, ಆಶಾ ಶೆಟ್ಟಿ ಶಿಬರೂರು, ಸಾರಿಕಾ ಶೆಟ್ಟಿ, ಸುಲೋಚನಾ ನವೀನ್, ನಾಟಕ ರಚನೆಕಾರ, ನಿರ್ದೇಶಕ ಪರಮಾನಂದ ಸಾಲ್ಯಾನ್ ಸಸಿಹಿತ್ಲು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ಬಳಿಕ ಬಾಲೆಗ್ ಒಲಿಯಿನ ಭ್ರಾಮರಿ ನಾಟಕದ ಪಾತ್ರಧಾರಿಗಳಿಗೆ ಪಾತ್ರಗಳ ವಿತರಣೆಯನ್ನು ಪರಮಾನಂದ ಸಾಲ್ಯಾನ್ ಮಾಡಿದರು. ಭಕ್ತಿ ಪ್ರಧಾನ ನಾಟಕದಲ್ಲಿ ಕಲಾವಿದರು ಶ್ರದ್ದಾ ಭಕ್ತಿಯಿಂದ ಪಾತ್ರ ನಿರ್ವಹಿಸುವಂತೆ ವಿನಂತಿಸಿದರು. ಮಹಿಳಾ ಮಂಡಳಿಯ ಸದಸ್ಯೆಯರಿಂದ ನಾಟಕ ಪ್ರದರ್ಶನಗೊಳ್ಳುತ್ತಿದೆ. ಆಶಾ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!