ಜನ ಮನದ ನಾಡಿ ಮಿಡಿತ

Advertisement

ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ದಿಂದ ಆತನ ರಕ್ಷಣೆ…!

ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.

ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. 

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!