ಜನ ಮನದ ನಾಡಿ ಮಿಡಿತ

Advertisement

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಮಾನಹಾನಿಕರ ಸಂದೇಶ ರವಾನೆ; ಮೂವರ ವಿರುದ್ಧ ದೂರು ದಾಖಲು

ಮಂಗಳೂರು: ಕಳೆದ ಶನಿವಾರದಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶದ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸಿರುವ ಆರೋಪದಡಿ ಜೆಡಿಎಸ್ ಪಕ್ಷದ ನಾಯಕ ಮೊಹಿದೀನ್ ಬಾವ ಅವರ ಬೆಂಬಲಿಗರು ಎನ್ನಲಾದ ಮೂವರ ವಿರುದ್ಧ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುರತ್ಕಲ್ ಹಾಗೂ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Ex MLA Dr.MBava Fans ವಾಟ್ಸಾಪ್ ಗ್ರೂಪ್ ಗೆ 9980385002 ನಂಬರಿನ ಮುನಾವರ್ ಯಾನೆ ಶರೀಫ್, MOHOYUDDIN BAVA Fans ಹೆಸರಿನ ವಾಟ್ಸಾಪ್ ಗ್ರೂಪ್ ಗೆ 9535436033 ನಂಬರಿನ ಮೊಹಮ್ಮದ್ ಇಮ್ರಾನ್ ಚೊಕ್ಕಬೆಟ್ಟು ಮತ್ತು 2023 ಶಾಸಕರು ಮೊಯಿದ್ದಿನ ಭಾವ ವಾಟ್ಸಾಪ್ ಗ್ರೂಪ್ ಗೆ 9902174580 ನಂಬರಿನ ಶಯಾನ್ ಹೆಸರಿನ ಆರೋಪಿಗಳ ಮೇಲೆ ದೂರು ದಾಖಲಾಗಿದೆ.

ಈ‌ ಸಂಧರ್ಭದಲ್ಲಿ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪುರುಷೋತ್ತಮ ಚಿತ್ರಾಪುರ, ಸದಾಶಿವ ಶೆಟ್ಟಿ, ಶಶಿಕಲಾ ಪದ್ಮನಾಭ, ಬಶೀರ್ ಬೈಕಂಪಾಡಿ, ಶಮೀರ್ ಕಾಟಿಪಳ್ಳ, ಸತ್ತಾರ್ ಕೃಷ್ಣಾಪುರ, ರಾಜೇಶ್ ಕುಳಾಯಿ, ಜಲೀಲ್ ಬದ್ರಿಯಾ, ಹೇಮಂತ್, ಚಂದ್ರಹಾಸ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಬಜಪೆ ಪೋಲಿಸ್ ಠಾಣೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಕೃಷ್ಣ ಅಮೀನ್, ಯು.ಪಿ.ಇಬ್ರಾಹಿಂ, ಮೆಲ್ವಿನ್, ಬಾಷ ಗುರುಪುರ, ರಾಜ್ ಕುಮಾರ್ ಶೆಟ್ಟಿ, ಸಿರಾಜ್ ಮೋನು, ಮುಸ್ತಫಾ ಗಂಜೀಮಠ, ಶರೀಫ್ ಉಳಾಯಿಬೆಟ್ಟು, ಎ.ಕೆ.ಹಾರಿಸ್, ಶೇಖ್ ಕಂದಾವರ ಹಾಗೂ ಇಸಾಕ್ ಉಳಾಯಿಬೆಟ್ಟು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!