ಜನ ಮನದ ನಾಡಿ ಮಿಡಿತ

Advertisement

ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ

ಕರಾವಳಿ ಕರ್ನಾಟಕದ ಕಲಾವಿದರಿಗೆ ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದೆ.

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣರಿಗೆ, ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ಪಟ್ಲ ಫೌಂಡೇಶನಿನ ಮೂಲಕ ನೂತನ ಮನೆಯನ್ನು ನಿರ್ಮಿಸಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿ ಬಳಿಕ ಮನೆಯನ್ನು ಹಸ್ತಾಂತರಿಸಲಾಯಿತು.


ಕೊಡುಗೈ ದಾನಿಗಳು, ಫೌಂಡೇಶನಿನ ಮಹಾದಾನಿಗಳೂ ಆದ ಶಶಿಧರ ಬಿ.ಶೆಟ್ಟಿ ಬರೋಡರವರ ಹೆಸರಿನಲ್ಲಿ ಈ ಮನೆಯನ್ನು ನಿರ್ಮಿಸಲಾಗಿದ್ದು, ನೂತನ ಮನೆಯ ಕೀ ಯನ್ನ ಗುಡ್ಡಪ್ಪ ಸುವರ್ಣ ದಂಪತಿಗೆ ನಿಡಲಾಯಿತು. ದಂಪತಿ ಮಹಾದಾನಿಗಳಾದ ಶಶಿಧರ ಬಿ ಶೆಟ್ಟಿ ಬರೋಡವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಸವಣೂರು ಸೀತಾರಾಮ ರೈ, ಹಿರಿಯ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ, ಸಸಿಹಿತ್ಲು ಮೇಳದ ಯಜಮಾನರಾದ ರಾಜೇಶ್ ಗುಜರನ್, ಸುಳ್ಯ ಘಟಕದ ಶ್ರೀನಾಥ್ ರೈ, ಪ್ರೀತಮ್ ರೈ, ಬೆಳ್ಳಾರೆ ರಮೇಶ್ ರೈ, ಪ್ರಶಾಂತ್ ರೈ ಪಂಜ, ಡಾ. ಪ್ರಖ್ಯಾತ ಶೆಟ್ಟಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!