ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ದುಷ್ಕರ್ಮಿಗಳ ತಂಡದಿಂದ ಗುಂಡಿಕ್ಕಿ ಯುವಕನ ಹತ್ಯೆ

ಉಡುಪಿ: ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಯುವಕನನ್ನು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.


ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ 9:30 ಸುಮಾರಿಗೆ ಕೃಷ್ಣ ಅವರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡವು ಕೃಷ್ಣ ಅವರ ಮೇಲೆ ಫೈರಿಂಗ್ ನಡೆಸಿದೆ. ಬಳಿಕ ಅಲ್ಲಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ ಅವರು, ಮನೆಯಲ್ಲಿ ಏಕಾಂಗಿಯಾಗಿ ವಾಸಮಾಡಿಕೊಂಡಿದ್ದರು. ಘಟನೆ ನಡೆಯುವ ಸಂದರ್ಭದಲ್ಲಿ ಅಕ್ಕ ಪಕ್ಕದ ಮನೆಯವರು ಪಟಾಕಿಯ ಶಬ್ದವೆಂದು ಸುಮ್ಮನೆ ಕುಳಿತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!