ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾರು ಅಪಘಾತ ಪ್ರಕರಣ; ತಂದೆಯ ವಿರುದ್ಧ ಮಗನ ದೂರು..!

ಕಾರು ಅಪಘಾತ ಸಂಭವಿಸಿದ ಪ್ರಕರಣದಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನೆಯ ವಿವರ:

ಹಮೀದ್ ಅವರು ಬೆಳ್ತಂಗಡಿಯಿಂದ ಉಳ್ಳಾಲ ದರ್ಗಾಕ್ಕೆ ಹೋಗುವರಿದ್ದು, ಕಾರಿನಲ್ಲಿ ಪತ್ನಿ ಜಮೀಳಾ, ಮಕ್ಕಳಾದ ಮೊಹಮ್ಮದ್ ಅನಿಝ್, ಹಮೀದ್, ಅಜ್ಮಿಯಾ ಹಾಗೂ ಮಗಳ ಮಗ ಮೊಹಮ್ಮದ್ ಝಯಾನ್ಅವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಸಜೀಪ ನಡು ಗ್ರಾಮದ ಕೋಟೆ ಕಣಿ ಎಂಬಲ್ಲಿ ಕಾರು ಸ್ಕಿಡ್ ಆಗಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ . ಘಟನೆಯಿಂದ ಕಾರಿನಲ್ಲಿದ್ದ ಎಲ್ಲರಿಗೂ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಹಮೀದ್ ಅವರು ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಕಾರಣ ಕಾರು ಗುಂಡಿಗೆ ಬಿದ್ದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!