ಜನ ಮನದ ನಾಡಿ ಮಿಡಿತ

Advertisement

ಶಾಸಕಿ ಹೇಳಿಕೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ

ಕಡಬ: ಕಡಬ ಸರಕಾರಿ ಕಾಲೇಜಿನ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಬಗ್ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನೀಡಿರುವ ಹೇಳಿಕೆಯನ್ನು ಕಡಬ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್
ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಆ್ಯಸಿಡ್ ದಾಳಿ
ವಿಚಾರದಲ್ಲಿ ರಾಜ್ಯ ಸರಕಾರ ತಕ್ಷಣ ಸ್ಪಂದಿಸಿದೆ. ಆದರೂ
ಶಾಸಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು

ಆರೋಪಿಸಿದರು. ಆ್ಯಸಿಡ್ ದಾಳಿ ಹಿನ್ನೆಲೆಯಲ್ಲಿ ರಾಜ್ಯ
ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ
ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು
ಹೇಳಿರುವುದು ಅವರ ಹತಾಶ ಮನೋಭಾವ. ಇದು
ಖಂಡನೀಯ” ಎಂದರು.

ಸರಕಾರದ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸಂತ್ರಸ್ತೆಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಲ್ಲದೆ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ ಎಂದು ಸುಧೀರ್ ಶೆಟ್ಟಿ ಸರಕಾರದ ಕ್ರಮವನ್ನು ಸಮರ್ಥಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ಕಾಂಗ್ರೆಸ್ ಮುಖಂಡರಾದ ಸತೀಶ್ ನ್ಯಾಕ್ ಮೇಲಿನ ಮನೆ, ಅಶ್ರಫ್ ಶೇಡಿಗುಂಡಿ, ಕೆ.ಎಂ.ಹನೀಫ್, ಸತೀಶ್ ಶೆಟ್ಟಿ ಬೀರುಕ್ಕು, ಜಯರಾಮ ಎಡಮಂಗಲ, ಸತೀಶ್ ಮೀನಾಡಿ, ಫೈಝಲ್ ಕಡಬ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!